ಉಡುಪಿ: ದೆಹಲಿಯ NSD ವಿದ್ಯಾರ್ಥಿಗಳಿಗೆ ಗುರು ಬನ್ನಂಜೆ ಸಂಜೀವ ಸುವರ್ಣ ರಿಂದ ಯಕ್ಷಗಾನ ತರಬೇತಿ ಶಿಬಿರ ಆರಂಭವಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆಯಲ್ಲಿ ತಿಂಗಳೆ ಪ್ರತಿಷ್ಠಾನದ ಸಹಯೋಗದೊಂದಿಗೆ ಈ 11 ದಿನಗಳ ಶಿಬಿರ ನಡೆಯಲಿದೆ.
ಶಿಬಿರಕ್ಕೆ ಉದ್ಯಮಿ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಚಾಲನೆ ನೀಡಿದರು. ಗುರು ಸಂಜೀವ ಸುವರ್ಣ ಅವರಲ್ಲಿ ಯಕ್ಷಗಾನ ತರಬೇತಿ ಪಡೆಯುವುದೇ ಪೂರ್ವ ಜನ್ಮದ ಸುಕೃತ ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರು ಬನ್ನಂಜೆ ಸಂಜೀವ ಸುವರ್ಣ ಮಾತನಾಡಿ, ಕಲಿಯುವ ತುಡಿತ ಸಾಧನೆಯ ಛಲ ಇವೆರಡು ಇದ್ದರೆ ಸಾಕು ಯಾವ ಕಲೆಯನ್ನು ಸುಲಲಿತವಾಗಿ ಅಭ್ಯಾಸ ಮಾಡಬಹುದು ಎಂದರು.
ವೇದಿಕೆಯಲ್ಲಿ ತಿಂಗಳೆ ಪ್ರತಿಷ್ಠಾನದ ಮುಖ್ಯಸ್ಥರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಎನ್ ಎಸ್ ಡಿ ದೆಹಲಿ ಇದರ ಮುಖ್ಯಸ್ಥರಾದ ಪ್ರೊ.ವಿವೇಕ್, ಭಾಗವತರಾದ ಲಂಬೋಧರ ಹೆಗಡೆ, ಶ್ರೀಧರ ಹೆಗಡೆ ಉಪಸ್ಥಿತರಿದ್ದರು.
ಬನ್ನಂಜೆ ಸಂಜೀವ ಸುವರ್ಣ ರ ಶಿಷ್ಯರಾದ ಶೃತಿ ಬಂಗೇರ , ಪಲ್ಲವಿ ಕೊಡಗು , ಶಿಶಿರ್, ಮನೋಜ್, ಕಾರ್ತಿಕ್ ,ಸುಮಂತ್ ತಂಡದವರು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ದೆಹಲಿ NSD ಯ 30 ವಿದ್ಯಾರ್ಥಿಗಳು ಮುಂದಿನ 10 ದಿನಗಳ ಕಾಲ ನಡೆಯುವ ಶಿಬಿರದಲ್ಲಿ ಭಾಗವಹಿಸಿ ಯಕ್ಷಗಾನವನ್ನು ಅಭ್ಯಾಸ ಮಾಡಲಿದ್ದಾರೆ. ಡಾ ಪ್ರಶಾಂತ ಶೆಟ್ಟಿ ಕಾರ್ಯಕ್ರಮ ಸ್ವಾಗತಿಸಿ ನಿರೂಪಿಸಿದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…