ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿಯ ಶಂಕರಪುರ ಹೃದಯಭಾಗದಲ್ಲಿ ಕೇಬಲ್ ಅಳವಡಿಸಲು ಅಗೆದಿರುವ ಗುಂಡಿಯು ಮೃತ್ಯು ಕೂಪವಾಗಿ ಪರಿಣಮಿಸಿದೆ.
ಶಂಕರಪುರ ಬಸ್ ನಿಲ್ದಾಣದ ಸಮೀಪ ಕೇಬಲ್ ಅಳವಡಿಸುವ ಸಲುವಾಗಿ ಬೃಹತ್ ಗುಂಡಿಯನ್ನು ತೆಗೆದಿದ್ದು, ಅದನ್ನು ಮುಚ್ಚದೆ ಬಿಟ್ಟುಹೋಗಿದ್ದಾರೆ. ಇದೀಗ ಈ ಗುಂಡಿಯು ಅಪಾಯವನ್ನು ಆಹ್ವಾನಿಸುತ್ತಿದೆ. ಈಗಾಗಲೇ ಮಳೆ ಕೂಡ ಆರಂಭವಾಗಿದ್ದು, ಗುಂಡಿಯಲ್ಲಿ ಮಳೆ ನೀರು ನಿಂತು ಸಾವು ನೋವು ಸಂಭವಿಸುವ ಸಾಧ್ಯತೆ ಇದೆ. ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿ ಹೊಸದಾಗಿ ಡಾಂಬರೀಕರಣ ಆಗಿ ತಿಂಗಳೆ ಕಳೆದಿಲ್ಲ. ಅಷ್ಟರೊಳಗೆ ಕೇಬಲ್ ಅಳವಡಿಕೆಗಾಗಿ ಗುಂಡಿ ಅಗೆದಿದ್ದಾರೆ. ಕಾಮಗಾರಿ ಮುಗಿದ ಬಳಿಕ ಗುಂಡಿಯನ್ನು ಮುಚ್ಚದೆ ಹಾಗೆಯೆ ಬಿಟ್ಟಿದ್ದು, ಇದು ಮಳೆಗಾಲದಲ್ಲಿ ಕುಸಿದು ರಸ್ತೆಯು ಹಾಳಾಗುವ ಸಾಧ್ಯತೆ ಇದೆ. ಹಾಗಾಗಿ ಸಂಬ0ಧಪಟ್ಟವರು ಕೂಡಲೇ ಗುಂಡಿಯನ್ನು ಮುಚ್ಚಿ ಮುಂದೆ ನಡೆಯಬಹುದಾದ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…