ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮೇ. 19 ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ಹಾಮದ್ ಹಾಜಿರಸ್ತೆಯ ಪರ್ಲಬೈಲು ನಿವಾಸಿ ಮಜೀದ್ ಎಂಬವರ ಮನೆಯಲ್ಲಿ ಸುಮಾರು 1,49,000 ಸಾವಿರ ಮೌಲ್ಯದ 28 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳವು ನಡೆದಿತ್ತು. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಮಹಡಿಯ ಹಂಚನ್ನು ಸರಿಸಿ ಒಳಪ್ರವೇಶಿಸಿ ಮನೆಯ ಕಪಾಟಿನಲ್ಲಿ ಇಟ್ಟಿದ್ದ ಚಿನ್ನವನ್ನು ಕಳವು ಮಾಡಿದ್ದರು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸರು ಆರೋಪಿ ತುಂಬೆ ನಿವಾಸಿ ಹಸನ್ ಬಾವ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಕಳ್ಳತನ ಪ್ರಕರಣವನ್ನು ಎಸ್.ಪಿ. ಯತೀಶ್ ಎನ್, ಹೆಚ್ಚುವರಿ ಪೋಲೀಸ್ ಅಧೀಕ್ಷಕ ರಾಜೇಂದ್ರ ಹೆಚ್ಚುವರಿ ಬಂಟ್ವಾಳ ಡಿ.ವೈ.ಎಸ್.ಪಿ.ವಿಜಯಪ್ರಸಾದ್ ರವರ ಮಾರ್ಗದರ್ಶನದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ.ರವರ ನೇತೃತ್ವದಲ್ಲಿ ಪಿಎಸ್ ಐ ಗಳಾದ ಮಂಜುನಾಥ ಟಿ, ಖೀರಪ್ಪ ಘಟಕಾಂಬಳೆ ,ಎ.ಎಸ್. ಐ ಗಳಾದ ಗಿರೀಶ್,ಬಾಲಕೃಷ್ಣ ,ಹೆಚ್.ಸಿ. ಗಳಾದ ನಝೀರ್, ಹರಿಶ್ಚಂದ್ರ, ಲೋಕೇಶ್,ಕೃಷ್ಣ ನಾಯ್ಕ, ಪಿ.ಸಿ ಸಹದೇವ ಇವರುಗಳು ವಿಶೇಷ ಕಾರ್ಯಾಚರಣೆ ನಡೆಸಿರುತ್ತಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…