ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ಜಿಲ್ಲಾಧಿಕಾರಿಗಳ ಕ್ರಮಕ್ಕೆ ಎಸ್ಸಿ/ಎಸ್ಟಿ ಸಂಘ ಸಂಸ್ಥೆಗಳ ಮಹಾಒಕ್ಕೂಟ ವಿರೋಧ

ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ `ಮೇರಾ’ ಮತ್ತು `ಮಾನ್ಸಾ’ ಹೆಸರಿನ ಜಾತಿಗಳನ್ನು ಒಳ ಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಿಸಿರುವ ಉಡುಪಿ ಜಿಲ್ಲಾಧಿಕಾರಿಗಳ ಕ್ರಮವನ್ನು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟವು ವಿರೋಧಿಸಿದೆ.

ಅಲ್ಲದೆ, ಜಿಲ್ಲಾಧಿಕಾರಿಗಳ ಕ್ರಮ “ಸಂವಿಧಾನ ವಿರೋಧಿ ಹಾಗೂ ಕಾನೂನು ಬಾಹಿರ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರು, ‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ “ಮೇರಾ” ಮತ್ತು “ಮಾನ್ಸಾ’ ಜಾತಿ ಎರಡರಲ್ಲಿ ಗೊಂದಲವಿದೆ. ಈ ಜಾತಿಯನ್ನು ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಸರಕಾರಕ್ಕೆ ವರದಿ ಕಳುಹಿಸಲಾಗಿದೆ’ ಎಂದು ಒಳಮೀಸಲಾತಿ ಸಮೀಕ್ಷೆ ಕುರಿತು ಸುದ್ಧಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಹಾಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಮೊಗೇರ ಸಂಘದ ಅಧ್ಯಕ್ಷ ಸೀತಾರಾಮ್ ಕೊಂಚಾಡಿ, ರಾಜ್ಯ ಆದಿದ್ರಾವಿಡ ಸಮಾಜದ ರಾಜ್ಯ ಅಧ್ಯಕ್ಷ ಗಣೇಶ್ ಪ್ರಸಾದ್, ರಾಜ್ಯ ಮುಖಂಡ ಅನಿಲ್ ಕಂಕನಾಡಿ, ಉಡುಪಿಯ ಮುಂಡಾಲ ಸಮಾಜದ ಮುಖಂಡ ಬಿ ಕೆ ರಾಜು ಮತ್ತಿತರರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!