ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ `ಮೇರಾ’ ಮತ್ತು `ಮಾನ್ಸಾ’ ಹೆಸರಿನ ಜಾತಿಗಳನ್ನು ಒಳ ಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಿಸಿರುವ ಉಡುಪಿ ಜಿಲ್ಲಾಧಿಕಾರಿಗಳ ಕ್ರಮವನ್ನು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟವು ವಿರೋಧಿಸಿದೆ.
ಅಲ್ಲದೆ, ಜಿಲ್ಲಾಧಿಕಾರಿಗಳ ಕ್ರಮ “ಸಂವಿಧಾನ ವಿರೋಧಿ ಹಾಗೂ ಕಾನೂನು ಬಾಹಿರ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರು, ‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ “ಮೇರಾ” ಮತ್ತು “ಮಾನ್ಸಾ’ ಜಾತಿ ಎರಡರಲ್ಲಿ ಗೊಂದಲವಿದೆ. ಈ ಜಾತಿಯನ್ನು ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಸರಕಾರಕ್ಕೆ ವರದಿ ಕಳುಹಿಸಲಾಗಿದೆ’ ಎಂದು ಒಳಮೀಸಲಾತಿ ಸಮೀಕ್ಷೆ ಕುರಿತು ಸುದ್ಧಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಹಾಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಮೊಗೇರ ಸಂಘದ ಅಧ್ಯಕ್ಷ ಸೀತಾರಾಮ್ ಕೊಂಚಾಡಿ, ರಾಜ್ಯ ಆದಿದ್ರಾವಿಡ ಸಮಾಜದ ರಾಜ್ಯ ಅಧ್ಯಕ್ಷ ಗಣೇಶ್ ಪ್ರಸಾದ್, ರಾಜ್ಯ ಮುಖಂಡ ಅನಿಲ್ ಕಂಕನಾಡಿ, ಉಡುಪಿಯ ಮುಂಡಾಲ ಸಮಾಜದ ಮುಖಂಡ ಬಿ ಕೆ ರಾಜು ಮತ್ತಿತರರು ಉಪಸ್ಥಿತರಿದ್ರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…