ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ `ಮೇರಾ’ ಮತ್ತು `ಮಾನ್ಸಾ’ ಹೆಸರಿನ ಜಾತಿಗಳನ್ನು ಒಳ ಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಿಸಿರುವ ಉಡುಪಿ ಜಿಲ್ಲಾಧಿಕಾರಿಗಳ ಕ್ರಮವನ್ನು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟವು ವಿರೋಧಿಸಿದೆ.
ಅಲ್ಲದೆ, ಜಿಲ್ಲಾಧಿಕಾರಿಗಳ ಕ್ರಮ “ಸಂವಿಧಾನ ವಿರೋಧಿ ಹಾಗೂ ಕಾನೂನು ಬಾಹಿರ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರು, ‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ “ಮೇರಾ” ಮತ್ತು “ಮಾನ್ಸಾ’ ಜಾತಿ ಎರಡರಲ್ಲಿ ಗೊಂದಲವಿದೆ. ಈ ಜಾತಿಯನ್ನು ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಸರಕಾರಕ್ಕೆ ವರದಿ ಕಳುಹಿಸಲಾಗಿದೆ’ ಎಂದು ಒಳಮೀಸಲಾತಿ ಸಮೀಕ್ಷೆ ಕುರಿತು ಸುದ್ಧಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಹಾಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಮೊಗೇರ ಸಂಘದ ಅಧ್ಯಕ್ಷ ಸೀತಾರಾಮ್ ಕೊಂಚಾಡಿ, ರಾಜ್ಯ ಆದಿದ್ರಾವಿಡ ಸಮಾಜದ ರಾಜ್ಯ ಅಧ್ಯಕ್ಷ ಗಣೇಶ್ ಪ್ರಸಾದ್, ರಾಜ್ಯ ಮುಖಂಡ ಅನಿಲ್ ಕಂಕನಾಡಿ, ಉಡುಪಿಯ ಮುಂಡಾಲ ಸಮಾಜದ ಮುಖಂಡ ಬಿ ಕೆ ರಾಜು ಮತ್ತಿತರರು ಉಪಸ್ಥಿತರಿದ್ರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…