ಆಪರೇಷನ್ ಸಿಂದೂರದ ಬಳಿಕ ಪ್ರಧಾನಿ ಮೋದಿ ಗುರುವಾರ ರಾಜಸ್ಥಾನದ ಬಿಕಾನೇರ್ನಲ್ಲಿರುವ ನಲ್ ವಾಯುನೆಲೆಗೆ ಭೇಟಿ ನೀಡಿದ್ದಾರೆ. ರಾಜಸ್ಥಾನದಲ್ಲಿ ಇಂದು ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಭಾರತವು 22 ನಿಮಿಷಗಳಲ್ಲಿ ಸೇಡು ತೀರಿಸಿಕೊಂಡಿದೆ ಎಂದು ಹೇಳಿದ್ದಾರೆ. ನಮ್ಮ ನೆಲದ ಮೇಲೆ ದಾಳಿ ನಡೆಸಿದವರನ್ನು ಅವರ ನೆಲದಲ್ಲಿಯೇ ಹೂತು ಹಾಕಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.
ಏಪ್ರಿಲ್ 22 ರ ದಾಳಿಗೆ ಪ್ರತಿಕ್ರಿಯೆಯಾಗಿ, ನಾವು ಭಯೋತ್ಪಾದಕರ ಒಂಬತ್ತು ದೊಡ್ಡ ಅಡಗುತಾಣಗಳನ್ನು 22 ನಿಮಿಷಗಳಲ್ಲಿ ನಾಶಪಡಿಸಿದ್ದೇವೆ. ಸಿಂದೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಎಂಬುದನ್ನು ಶತ್ರು ರಾಷ್ಟ್ರಕ್ಕೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. ರಕ್ತವಲ್ಲ, ನನ್ನ ರಕ್ತನಾಳಗಳಲ್ಲಿಯೂ ಸಿಂದೂರ ಕುದಿಯುತ್ತಿದೆ ಎಂದು ಅವರು ಹೇಳಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡಲು ಭಾರತ ಒಗ್ಗಟ್ಟಾಗಿದೆ. ನಾವು ಭಯೋತ್ಪಾದನೆಯ ವಿರುದ್ಧ ಸಮರ ಸಾರಿದ್ದೇವೆ. ಸರ್ಕಾರವು ಮಿಲಿಟರಿಗೆ ಮುಕ್ತ ಹಸ್ತ ನೀಡಿತು ಮತ್ತು ಸಶಸ್ತ್ರ ಪಡೆಗಳು ಪಾಕಿಸ್ತಾನವನ್ನು ಮಂಡಿಯೂರುವಂತೆ ಮಾಡಿದವು ಎಂದು ಪ್ರಧಾನಿ ಮಾತನಾಡಿದ್ದಾರೆ.
“ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಲು ಬಂದವರು, ಇಂದು ಮಣ್ಣಾಗಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಸೇನಾ ಕಾರ್ಯಚರಣೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಓಕೆ)ದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…