ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ನಿದ್ದೆ ಮಂಪರಿನಲ್ಲಿ 3 ಕಿಲೋ ಮೀಟರ್ ನಡೆದ ಬಾಲಕಿ, ಮನೆ ತಲುಪಿಸಿದ ಬಾರ್ ಸಿಬ್ಬಂದಿಗಳು

ಕುಂದಾಪುರ: ರಾತ್ರಿ ಮನೆಯಲ್ಲಿ ಮಲಗಿದ್ದ ಆರು ವರ್ಷದ ಬಾಲಕಿ ನಿದ್ದೆಯ ಮಂಪರಿನಲ್ಲಿ ಎದ್ದು ಸುಮಾರು ಮೂರು ಕಿಲೋಮೀಟರ್ ನಡೆದು ಕೊರಗಜ್ಜನ ಕಟ್ಟೆಯ ನಾಮಫಲಕದ ಎದುರು ಪತ್ತೆಯಾಗಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಉಡುಪಿಯ ಕುಂದಾಪುರದ ಕೆದೂರು ಸಮೀಪದ ದಬ್ಬೆಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು,ದೈವ ಕೊರಗಜ್ಜನೇ ಮಗುವನ್ನು ತಡೆದು ರಕ್ಷಿಸಿದ್ದಾರೆ ಎನ್ನಲಾಗಿದೆ. ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಚಾರುಕೊಟ್ಟಿಗೆ ಸಮೀಪದ ದಬ್ಬೆಕಟ್ಟೆ – ತೆಕ್ಕಟ್ಟೆ ರಸ್ತೆಯಲ್ಲಿ ಹೋಗುತ್ತಿದ್ದ ಚಾರುಕೊಟ್ಟಿಗೆ ಅರ್ಚನಾ ಬಾರ್ ನ ವಿಶ್ವನಾಥ್ ಎಂಬವರಿಗೆ ಬಾಲಕಿ ಸಿಕ್ಕಿದ ಬಳಿಕ ಆಕೆಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ.

ಚಾರುಕೊಟ್ಟಿಗೆ ಅರ್ಚನಾ ಬಾರ್ ನಾ ವಿಶು (ವಿಷ್ವನಾಥ್ ಪೂಜಾರಿ) ಬುಧವಾರ ತಡರಾತ್ರಿ ಸುಮಾರು ೨ ಗಂಟೆ ಹೊತ್ತಿಗೆ ತನ್ನ ಬಾರಿನ ಎಲ್ಲಾ ಕೆಲಸಗಳನ್ನು ಮುಗಿಸಿ ಸಿಬ್ಬಂದಿಗಳೊಂದಿಗೆ ಮನೆಗೆ ಹೋಗುತ್ತಿರುವ ಸಮದಲ್ಲಿ ದಬ್ಬೆಕಟ್ಟೆ ತೆಕ್ಕಟ್ಟೆ ರೋಡಿನಲ್ಲಿ ಆರು ವರ್ಷದ ಹೆಣ್ಣು ಮಗುವೊಂದು ವಿವಸ್ತ್ರವಾಗಿ ಕೊರಗಜ್ಜನ ಕಟ್ಟೆಯ ನಾಮಫಲಕದ ಕೆಳಗೆ ನಿಂತಿರುವುದನ್ನು ನೋಡಿದ್ದಾರೆ. ಒಂಟಿ ಮಗುವೊಂದು ಈ ಹೊತ್ತಿನಲ್ಲಿ ಬರಲು ಹೇಗೆ ಸಾಧ್ಯ ಎಂದು ಆಲೋಚಿಸಿ ಮಗುವಿನ ರಕ್ಷಣಗೆ ಮುಂದಾಗಿದ್ದಾರೆ. ಮಗುವಿನ ಬಳಿ ಆಕೆಯ ಮನೆದಾರಿಯ ಬಗ್ಗೆ ತಿಳಿದುಕೊಂಡು ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಮಗು ಮನೆಯಿಂದ ಹೊರಗೆ ಹೋದ ಬಗ್ಗೆ ತಿಳಿಯದ ಮನೆಯವರು ದಂಗಾಗಿದ್ದಾರೆ. ನಿದ್ದೆ ಕಣ್ಣಿನಲ್ಲಿ ಹೊರ ಹೋದ ಬಾಲಕಿಯನ್ನು ಆ ದೈವವೇ ತಡೆದು ನಿಲ್ಲಿಸಿದ್ದಾರೆ ಎಂದು ಭಕ್ತರು ನಂಬಿದ್ದಾರೆ. ಬಾರಿನಲ್ಲಿ ಕೆಲಸ ಮಾಡುವ ಜನರು ಬರೀ ಕೆಟ್ಟ ಕೆಲಸಗಳನ್ನೇ ಮಾಡುತ್ತಾರೆ ಎಂದು ಹೇಳುವ ಜನರ ಮನಸ್ಥಿತಿಯನ್ನು ಇಂತಹ ಘಟನೆಗಳು ಬದಲಾಯಿಸುತ್ತವೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!