ಕುಂದಾಪುರ: ರಾತ್ರಿ ಮನೆಯಲ್ಲಿ ಮಲಗಿದ್ದ ಆರು ವರ್ಷದ ಬಾಲಕಿ ನಿದ್ದೆಯ ಮಂಪರಿನಲ್ಲಿ ಎದ್ದು ಸುಮಾರು ಮೂರು ಕಿಲೋಮೀಟರ್ ನಡೆದು ಕೊರಗಜ್ಜನ ಕಟ್ಟೆಯ ನಾಮಫಲಕದ ಎದುರು ಪತ್ತೆಯಾಗಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಉಡುಪಿಯ ಕುಂದಾಪುರದ ಕೆದೂರು ಸಮೀಪದ ದಬ್ಬೆಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು,ದೈವ ಕೊರಗಜ್ಜನೇ ಮಗುವನ್ನು ತಡೆದು ರಕ್ಷಿಸಿದ್ದಾರೆ ಎನ್ನಲಾಗಿದೆ. ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಚಾರುಕೊಟ್ಟಿಗೆ ಸಮೀಪದ ದಬ್ಬೆಕಟ್ಟೆ – ತೆಕ್ಕಟ್ಟೆ ರಸ್ತೆಯಲ್ಲಿ ಹೋಗುತ್ತಿದ್ದ ಚಾರುಕೊಟ್ಟಿಗೆ ಅರ್ಚನಾ ಬಾರ್ ನ ವಿಶ್ವನಾಥ್ ಎಂಬವರಿಗೆ ಬಾಲಕಿ ಸಿಕ್ಕಿದ ಬಳಿಕ ಆಕೆಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ.
ಚಾರುಕೊಟ್ಟಿಗೆ ಅರ್ಚನಾ ಬಾರ್ ನಾ ವಿಶು (ವಿಷ್ವನಾಥ್ ಪೂಜಾರಿ) ಬುಧವಾರ ತಡರಾತ್ರಿ ಸುಮಾರು ೨ ಗಂಟೆ ಹೊತ್ತಿಗೆ ತನ್ನ ಬಾರಿನ ಎಲ್ಲಾ ಕೆಲಸಗಳನ್ನು ಮುಗಿಸಿ ಸಿಬ್ಬಂದಿಗಳೊಂದಿಗೆ ಮನೆಗೆ ಹೋಗುತ್ತಿರುವ ಸಮದಲ್ಲಿ ದಬ್ಬೆಕಟ್ಟೆ ತೆಕ್ಕಟ್ಟೆ ರೋಡಿನಲ್ಲಿ ಆರು ವರ್ಷದ ಹೆಣ್ಣು ಮಗುವೊಂದು ವಿವಸ್ತ್ರವಾಗಿ ಕೊರಗಜ್ಜನ ಕಟ್ಟೆಯ ನಾಮಫಲಕದ ಕೆಳಗೆ ನಿಂತಿರುವುದನ್ನು ನೋಡಿದ್ದಾರೆ. ಒಂಟಿ ಮಗುವೊಂದು ಈ ಹೊತ್ತಿನಲ್ಲಿ ಬರಲು ಹೇಗೆ ಸಾಧ್ಯ ಎಂದು ಆಲೋಚಿಸಿ ಮಗುವಿನ ರಕ್ಷಣಗೆ ಮುಂದಾಗಿದ್ದಾರೆ. ಮಗುವಿನ ಬಳಿ ಆಕೆಯ ಮನೆದಾರಿಯ ಬಗ್ಗೆ ತಿಳಿದುಕೊಂಡು ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಮಗು ಮನೆಯಿಂದ ಹೊರಗೆ ಹೋದ ಬಗ್ಗೆ ತಿಳಿಯದ ಮನೆಯವರು ದಂಗಾಗಿದ್ದಾರೆ. ನಿದ್ದೆ ಕಣ್ಣಿನಲ್ಲಿ ಹೊರ ಹೋದ ಬಾಲಕಿಯನ್ನು ಆ ದೈವವೇ ತಡೆದು ನಿಲ್ಲಿಸಿದ್ದಾರೆ ಎಂದು ಭಕ್ತರು ನಂಬಿದ್ದಾರೆ. ಬಾರಿನಲ್ಲಿ ಕೆಲಸ ಮಾಡುವ ಜನರು ಬರೀ ಕೆಟ್ಟ ಕೆಲಸಗಳನ್ನೇ ಮಾಡುತ್ತಾರೆ ಎಂದು ಹೇಳುವ ಜನರ ಮನಸ್ಥಿತಿಯನ್ನು ಇಂತಹ ಘಟನೆಗಳು ಬದಲಾಯಿಸುತ್ತವೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…