ಮುಂಬರುವ ಇಂಗ್ಲೆಂಡ್ ಪ್ರವಾಸದ ಭಾರತ 19ರ ವಯೋಮನ ಕ್ರಿಕೆಟ್ ತಂಡವನ್ನು ಮೇ 22 ರಂದು ಗುರುವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪ್ರಕಟಿಸಿದೆ. 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ಎಲ್ಲರ ಗಮನ ಸೆಳೆದಿದ್ದ 14ರ ವಯಸ್ಸಿನ ಪೋರ ವೈಭವ್ ಸೂರ್ಯವಂಶಿ ಭಾರತ ಅಂಡರ-19 ತಂಡದಲ್ಲಿ ಚೊಚ್ಚಲ ಅವಕಾಶವನ್ನು ಪಡೆದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆರಂಭಿಕ ಆಯುಷ್ ಮ್ಹಾತ್ರೆ ಅವರು ಭಾರತ ಕಿರಿಯರ ತಂಡಕ್ಕೆ ನಾಯಕನನ್ನಾಗಿ ನೇಮಿಸಲಾಗಿದೆ.
ಜೂನ್ 24 ರಿಂದ ಜುಲೈ 23ರವರೆಗೂ ಭಾರತ ತಂಡ ಇಂಗ್ಲೆಂಡ್ ಪ್ರವಾಸವನ್ನು ಹಮ್ಮಿಕೊಳ್ಳಲಿದೆ. ಇಂಗ್ಲೆಂಡ್ ಹಾಗೂ ಭಾರತ ತಂಡಗಳು ಮೊದಲಿಗೆ ಅಭ್ಯಾಸವನ್ನು ಪಂದ್ಯವನ್ನು ಆಡಲಿದೆ. ನಂತರ ಐದು ಪಂದ್ಯಗಳ ಯುವ ಏಕದಿನ ಸರಣಿಯಲ್ಲಿ ಉಭಯ ತಂಡಗಳು ಕಾದಾಟ ನಡೆಸಲಿವೆ. ನಂತರ ಎರಡು ದಿನಗಳ ಹಲವು ಪಂದ್ಯಗಳನ್ನು ಉಭಯ ತಂಡಗಳು ಕಾದಾಟ ನಡೆಸಲಿವೆ. ಇಂಗ್ಲೆಂಡ್ನಲ್ಲಿ ವೇಗದ ಬೌಲಿಂಗ್ ಕಂಡೀಷನ್ಸ್ ಇರುವ ಕಾರಣ ಭಾರತ ಅಂಡರ್-19 ತಂಡಕ್ಕೆ ಕಠಿಣ ಸವಾಲು ಎದುರಾಗಲಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…