ದೆಹಲಿಯ ಎನ್ಎಸ್ಡಿ ವಿದ್ಯಾರ್ಥಿಗಳಿಗೆ ಗುರು ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನ ತರಬೇತಿ ಶಿಬಿರ ಆರಂಭವಾಗಿದೆ.
ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆಯಲ್ಲಿ ತಿಂಗಳೆ ಪ್ರತಿಷ್ಠಾನದ ಸಹಯೋಗದೊಂದಿಗೆ ಈ 11 ದಿನಗಳ ಶಿಬಿರ ನಡೆಯಲಿದೆ. ಶಿಬಿರಕ್ಕೆ ಉದ್ಯಮಿ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಚಾಲನೆ ನೀಡಿದ್ರು. ಗುರು ಸಂಜೀವ ಸುವರ್ಣ ಅವರಲ್ಲಿ ಯಕ್ಷಗಾನ ತರಬೇತಿ ಪಡೆಯುವುದೇ ಪೂರ್ವ ಜನ್ಮದ ಸುಕೃತ ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ್ರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರು ಬನ್ನಂಜೆ ಸಂಜೀವ ಸುವರ್ಣ ಮಾತನಾಡಿ, ಕಲಿಯುವ ತುಡಿತ ಸಾಧನೆಯ ಛಲ ಇವೆರಡು ಇದ್ದರೆ ಸಾಕು ಯಾವ ಕಲೆಯನ್ನು ಸುಲಲಿತವಾಗಿ ಅಭ್ಯಾಸ ಮಾಡಬಹುದು ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ತಿಂಗಳೆ ಪ್ರತಿಷ್ಠಾನದ ಮುಖ್ಯಸ್ಥರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಎನ್ ಎಸ್ ಡಿ ದೆಹಲಿ ಇದರ ಮುಖ್ಯಸ್ಥರಾದ ಪ್ರೊ.ವಿವೇಕ್, ಭಾಗವತರಾದ ಲಂಬೋಧರ ಹೆಗಡೆ, ಶ್ರೀಧರ ಹೆಗಡೆ ಉಪಸ್ಥಿತರಿದ್ರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…