ಜನ ಮನದ ನಾಡಿ ಮಿಡಿತ

Advertisement

ಉಡುಪಿ ಕುಂಜಿಬೆಟ್ಟುವಿನ ಐವೈಸಿ ಸಭಾಂಗಣದಲ್ಲಿ ಕಾರ್ಯಕ್ರಮ; ಕೇರಳ ಸಮಾಜಮ್ ಉದ್ಘಾಟನೆ

ಕೇರಳ ಸಮಾಜಮ್ ಉಡುಪಿ ಇದರ ಉದ್ಘಾಟನಾ ಸಮಾರಂಭವು ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.

ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಇಡೀ ಜಗತ್ತಿಗೆ ಕೇರಳ ಸಮಾಜದ ಕೊಡುಗೆ ಅಪಾರ. ಯಾವುದೇ ದೇಶ, ರಾಜ್ಯಕ್ಕೆ ಹೋದರೂ ಕೇರಳಿಗರು ಸಿಗುತ್ತಾರೆ. ವೈದ್ಯಕೀಯ, ಶಿಕ್ಷಣ, ಬ್ಯಾಂಕಿ0ಗ್ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತನ್ನದೇ ಆದ ವಿಶಿಷ್ಟವಾದ ಕೊಡುಗೆಗಳನ್ನು ನೀಡುತ್ತಾ ವಿಶ್ವದ ಮೆಚ್ಚುಗೆಗೆ ಕೇರಳಿಗರು ಪಾತ್ರರಾಗಿದ್ದಾರೆ ಎಂದ್ರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಹಾಗೂ ಕೇರಳಿಗರ ಮಧ್ಯೆ ಭಾಷೆ ವಿಚಾರದಲ್ಲಿ ವ್ಯತ್ಯಾಸ ಇರಬಹುದು. ಆದರೆ ಆಚಾರ ವಿಚಾರದಲ್ಲಿ ಭಾವನಾತ್ಮಕವಾಗಿ ಬಹಳಷ್ಟು ಒಟ್ಟಾಗಿದ್ದೇವೆ. ಕೇರಳದಲ್ಲಿ ಅನುಸರಿಸಿಕೊಂಡು ಬರುತ್ತಿರುವ ಧಾರ್ಮಿಕ ಪದ್ಧತಿಯನ್ನೇ ಇಲ್ಲಿ ಕೂಡ ಅನುಸರಿಸಲಾಗುತ್ತಿದೆ. ಒಂದು ಸಮಾಜದ ಅಭಿವೃದ್ಧಿ, ಏಳಿಗೆ ಆಗಬೇಕಾದರೆ ಇಂತಹ ಸಂಘ ಸಂಸ್ಥೆಗಳು ಬಹಳ ಮುಖ್ಯ. ಈ ನೂತನ ಸಂಸ್ಥೆ ಬಹಳಷ್ಟು ಎತ್ತರಕ್ಕೆ ಬೆಳೆದು, ಸಮಾಜದ ಅಭಿವೃದ್ಧಿ ಶ್ರಮಿಸಲಿ ಎಂದು ಹಾರೈಸಿದ್ದಾರೆ. ಕೇರಳ ಸಮಾಜಮ್ ಉಡುಪಿ ಇದರ ಅಧ್ಯಕ್ಷ ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!