ಜನ ಮನದ ನಾಡಿ ಮಿಡಿತ

Advertisement

ಉಡುಪಿ ಕುಂಜಿಬೆಟ್ಟುವಿನ ಐವೈಸಿ ಸಭಾಂಗಣದಲ್ಲಿ ಕಾರ್ಯಕ್ರಮ; ಕೇರಳ ಸಮಾಜಮ್ ಉದ್ಘಾಟನೆ

ಕೇರಳ ಸಮಾಜಮ್ ಉಡುಪಿ ಇದರ ಉದ್ಘಾಟನಾ ಸಮಾರಂಭವು ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.

ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಇಡೀ ಜಗತ್ತಿಗೆ ಕೇರಳ ಸಮಾಜದ ಕೊಡುಗೆ ಅಪಾರ. ಯಾವುದೇ ದೇಶ, ರಾಜ್ಯಕ್ಕೆ ಹೋದರೂ ಕೇರಳಿಗರು ಸಿಗುತ್ತಾರೆ. ವೈದ್ಯಕೀಯ, ಶಿಕ್ಷಣ, ಬ್ಯಾಂಕಿ0ಗ್ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತನ್ನದೇ ಆದ ವಿಶಿಷ್ಟವಾದ ಕೊಡುಗೆಗಳನ್ನು ನೀಡುತ್ತಾ ವಿಶ್ವದ ಮೆಚ್ಚುಗೆಗೆ ಕೇರಳಿಗರು ಪಾತ್ರರಾಗಿದ್ದಾರೆ ಎಂದ್ರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಹಾಗೂ ಕೇರಳಿಗರ ಮಧ್ಯೆ ಭಾಷೆ ವಿಚಾರದಲ್ಲಿ ವ್ಯತ್ಯಾಸ ಇರಬಹುದು. ಆದರೆ ಆಚಾರ ವಿಚಾರದಲ್ಲಿ ಭಾವನಾತ್ಮಕವಾಗಿ ಬಹಳಷ್ಟು ಒಟ್ಟಾಗಿದ್ದೇವೆ. ಕೇರಳದಲ್ಲಿ ಅನುಸರಿಸಿಕೊಂಡು ಬರುತ್ತಿರುವ ಧಾರ್ಮಿಕ ಪದ್ಧತಿಯನ್ನೇ ಇಲ್ಲಿ ಕೂಡ ಅನುಸರಿಸಲಾಗುತ್ತಿದೆ. ಒಂದು ಸಮಾಜದ ಅಭಿವೃದ್ಧಿ, ಏಳಿಗೆ ಆಗಬೇಕಾದರೆ ಇಂತಹ ಸಂಘ ಸಂಸ್ಥೆಗಳು ಬಹಳ ಮುಖ್ಯ. ಈ ನೂತನ ಸಂಸ್ಥೆ ಬಹಳಷ್ಟು ಎತ್ತರಕ್ಕೆ ಬೆಳೆದು, ಸಮಾಜದ ಅಭಿವೃದ್ಧಿ ಶ್ರಮಿಸಲಿ ಎಂದು ಹಾರೈಸಿದ್ದಾರೆ. ಕೇರಳ ಸಮಾಜಮ್ ಉಡುಪಿ ಇದರ ಅಧ್ಯಕ್ಷ ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!