ಕೇರಳ ಸಮಾಜಮ್ ಉಡುಪಿ ಇದರ ಉದ್ಘಾಟನಾ ಸಮಾರಂಭವು ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.
ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಇಡೀ ಜಗತ್ತಿಗೆ ಕೇರಳ ಸಮಾಜದ ಕೊಡುಗೆ ಅಪಾರ. ಯಾವುದೇ ದೇಶ, ರಾಜ್ಯಕ್ಕೆ ಹೋದರೂ ಕೇರಳಿಗರು ಸಿಗುತ್ತಾರೆ. ವೈದ್ಯಕೀಯ, ಶಿಕ್ಷಣ, ಬ್ಯಾಂಕಿ0ಗ್ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತನ್ನದೇ ಆದ ವಿಶಿಷ್ಟವಾದ ಕೊಡುಗೆಗಳನ್ನು ನೀಡುತ್ತಾ ವಿಶ್ವದ ಮೆಚ್ಚುಗೆಗೆ ಕೇರಳಿಗರು ಪಾತ್ರರಾಗಿದ್ದಾರೆ ಎಂದ್ರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಹಾಗೂ ಕೇರಳಿಗರ ಮಧ್ಯೆ ಭಾಷೆ ವಿಚಾರದಲ್ಲಿ ವ್ಯತ್ಯಾಸ ಇರಬಹುದು. ಆದರೆ ಆಚಾರ ವಿಚಾರದಲ್ಲಿ ಭಾವನಾತ್ಮಕವಾಗಿ ಬಹಳಷ್ಟು ಒಟ್ಟಾಗಿದ್ದೇವೆ. ಕೇರಳದಲ್ಲಿ ಅನುಸರಿಸಿಕೊಂಡು ಬರುತ್ತಿರುವ ಧಾರ್ಮಿಕ ಪದ್ಧತಿಯನ್ನೇ ಇಲ್ಲಿ ಕೂಡ ಅನುಸರಿಸಲಾಗುತ್ತಿದೆ. ಒಂದು ಸಮಾಜದ ಅಭಿವೃದ್ಧಿ, ಏಳಿಗೆ ಆಗಬೇಕಾದರೆ ಇಂತಹ ಸಂಘ ಸಂಸ್ಥೆಗಳು ಬಹಳ ಮುಖ್ಯ. ಈ ನೂತನ ಸಂಸ್ಥೆ ಬಹಳಷ್ಟು ಎತ್ತರಕ್ಕೆ ಬೆಳೆದು, ಸಮಾಜದ ಅಭಿವೃದ್ಧಿ ಶ್ರಮಿಸಲಿ ಎಂದು ಹಾರೈಸಿದ್ದಾರೆ. ಕೇರಳ ಸಮಾಜಮ್ ಉಡುಪಿ ಇದರ ಅಧ್ಯಕ್ಷ ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…