ಕೇರಳ ಸಮಾಜಮ್ ಉಡುಪಿ ಇದರ ಉದ್ಘಾಟನಾ ಸಮಾರಂಭವು ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.
ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಇಡೀ ಜಗತ್ತಿಗೆ ಕೇರಳ ಸಮಾಜದ ಕೊಡುಗೆ ಅಪಾರ. ಯಾವುದೇ ದೇಶ, ರಾಜ್ಯಕ್ಕೆ ಹೋದರೂ ಕೇರಳಿಗರು ಸಿಗುತ್ತಾರೆ. ವೈದ್ಯಕೀಯ, ಶಿಕ್ಷಣ, ಬ್ಯಾಂಕಿ0ಗ್ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತನ್ನದೇ ಆದ ವಿಶಿಷ್ಟವಾದ ಕೊಡುಗೆಗಳನ್ನು ನೀಡುತ್ತಾ ವಿಶ್ವದ ಮೆಚ್ಚುಗೆಗೆ ಕೇರಳಿಗರು ಪಾತ್ರರಾಗಿದ್ದಾರೆ ಎಂದ್ರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಹಾಗೂ ಕೇರಳಿಗರ ಮಧ್ಯೆ ಭಾಷೆ ವಿಚಾರದಲ್ಲಿ ವ್ಯತ್ಯಾಸ ಇರಬಹುದು. ಆದರೆ ಆಚಾರ ವಿಚಾರದಲ್ಲಿ ಭಾವನಾತ್ಮಕವಾಗಿ ಬಹಳಷ್ಟು ಒಟ್ಟಾಗಿದ್ದೇವೆ. ಕೇರಳದಲ್ಲಿ ಅನುಸರಿಸಿಕೊಂಡು ಬರುತ್ತಿರುವ ಧಾರ್ಮಿಕ ಪದ್ಧತಿಯನ್ನೇ ಇಲ್ಲಿ ಕೂಡ ಅನುಸರಿಸಲಾಗುತ್ತಿದೆ. ಒಂದು ಸಮಾಜದ ಅಭಿವೃದ್ಧಿ, ಏಳಿಗೆ ಆಗಬೇಕಾದರೆ ಇಂತಹ ಸಂಘ ಸಂಸ್ಥೆಗಳು ಬಹಳ ಮುಖ್ಯ. ಈ ನೂತನ ಸಂಸ್ಥೆ ಬಹಳಷ್ಟು ಎತ್ತರಕ್ಕೆ ಬೆಳೆದು, ಸಮಾಜದ ಅಭಿವೃದ್ಧಿ ಶ್ರಮಿಸಲಿ ಎಂದು ಹಾರೈಸಿದ್ದಾರೆ. ಕೇರಳ ಸಮಾಜಮ್ ಉಡುಪಿ ಇದರ ಅಧ್ಯಕ್ಷ ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…