ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿರುವ ಡಿ.ಕೆ.ಶಿವಕುಮಾರ್, ಇವತ್ತಿನ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಅಧಿಕೃತವಾಗಿ ಈ ಸಂಬಂಧ ಆದೇಶ ಹೊರ ಬೀಳಲಿದೆ. ಇನ್ಮುಂದೆ ರಾಮನಗರ ಹೆಡ್ ಕ್ವಾಟ್ರಸ್ ಆಗಿರಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರವು ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ನಾಮಕರಣ ಮಾಡುವ ನಿರ್ಧಾರವನ್ನು ಜುಲೈ, 2024ರಲ್ಲೂ ತೆಗೆದುಕೊಂಡಿತ್ತು. ಈ ನಾಮಕರಣವು ‘ಬ್ರ್ಯಾಂಡ್ ಬೆಂಗಳೂರು’ ಹೆಸರಿನ ಮೂಲಕ ಜಿಲ್ಲೆಗೆ ಅಭಿವೃದ್ಧಿ ಮತ್ತು ಹೂಡಿಕೆ ಆಕರ್ಷಿಸಲು ಉದ್ದೇಶಿತವಾಗಿದೆ.

ಯಾವುದೇ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲು ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿತ್ತು. ಅಂತೆಯೇ ಕಳೆದ ಬಾರಿ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. ಹೀಗಾಗಿ ಈ ಬಾರಿಯ ಪ್ರಸ್ತಾಪ ಏನಾಗಲಿದೆ ಅನ್ನೋದು ತೀವ್ರ ಕುತೂಹಲ ಮೂಡಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಜೆಡಿಎಸ್​ ನಾಯಕ ಹೆಚ್​​ಡಿ ಕುಮಾರಸ್ವಾಮಿ ಇದ್ದಾರೆ. ಕುಮಾರಸ್ವಾಮಿ ಅವರು ಮೊದಲನಿಂದಲೂ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ವಿರೋಧಿಸುತ್ತ ಬಂದಿದ್ದಾರೆ.

 

 

ಈ ಬಗ್ಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರಾಮನಗರ ಹೆಸರು ಬದಲಾವಣೆಯ ಅಧಿಸೂಚನೆ ಇವತ್ತು ಆಗುತ್ತೆ. ಹೆಸರು ಬದಲಾವಣೆ ಮಾಡಲು ಯಾವುದೇ ಹಣ ಖರ್ಚಾಗೋದಿಲ್ಲ. ರಾಮನಗರ ಮೊದಲು ಬೆಂಗಳೂರು ಜಿಲ್ಲೆಗೆ ಸೇರಿತ್ತು. ಕನಕಪುರ, ಚನ್ನಪಟ್ಟಣ ಬೆಂಗಳೂರು ಜಿಲ್ಲೆಗೆ ಸೇರಿತ್ತು. ಹಿಂದೆ ನಾನು ಕೂಡ ಬೆಂಗಳೂರು ಜಿಲ್ಲೆಯ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ. ಬೆಂಗಳೂರು ಹೆಸರು ಉಳಿಸಬೇಕಿತ್ತು. ಅದಕ್ಕಾಗಿ ಹೆಸರು ಬದಲಾವಣೆ ಮಾಡಿದ್ದೇವೆ ಎಂದರು.

ನನ್ನನ್ನ ಕೂಡ ನೀವು ಬೆಂಗಳೂರು ದಕ್ಷಿಣ ಜಿಲ್ಲೆಯವರು ಅಂತ ಕರೆಯಬೇಕು. ಹೆಸರು ಬದಲಾವಣೆಗೆ ಕೇಂದ್ರಕ್ಕೆ ಯಾವುದೇ ಅಧಿಕಾರ‌ ಇರಲಿಲ್ಲ. ಕೇಂದ್ರದ‌ ಗಮನಕ್ಕೆ ತರಬೇಕಿತ್ತು, ಹಾಗಾಗಿ ಹೆಸರನ್ನ ಕಳುಹಿಸಿಕೊಟ್ಟಿದ್ದೆವು ಅಷ್ಟೇ. ವಿಶ್ವದಲ್ಲೇ ಬೆಂಗಳೂರು ದಕ್ಷಿಣ ದೊಡ್ಡದಾಗಿ ಬೆಳೆಯುತ್ತಿದೆ. ಕಾನೂನು ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಹೆಸರು ಬದಲಾವಣೆ ಮಾಡಿದ್ದೇವೆ. ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಇರೋದಿಲ್ಲ. ಈಗ ಹೇಗಿದೆಯೋ ಹಾಗೆಯೇ ಇರಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!