ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಮಾತನಾಡಿರುವ ಡಿ.ಕೆ.ಶಿವಕುಮಾರ್, ಇವತ್ತಿನ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಅಧಿಕೃತವಾಗಿ ಈ ಸಂಬಂಧ ಆದೇಶ ಹೊರ ಬೀಳಲಿದೆ. ಇನ್ಮುಂದೆ ರಾಮನಗರ ಹೆಡ್ ಕ್ವಾಟ್ರಸ್ ಆಗಿರಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ನಾಮಕರಣ ಮಾಡುವ ನಿರ್ಧಾರವನ್ನು ಜುಲೈ, 2024ರಲ್ಲೂ ತೆಗೆದುಕೊಂಡಿತ್ತು. ಈ ನಾಮಕರಣವು ‘ಬ್ರ್ಯಾಂಡ್ ಬೆಂಗಳೂರು’ ಹೆಸರಿನ ಮೂಲಕ ಜಿಲ್ಲೆಗೆ ಅಭಿವೃದ್ಧಿ ಮತ್ತು ಹೂಡಿಕೆ ಆಕರ್ಷಿಸಲು ಉದ್ದೇಶಿತವಾಗಿದೆ.
ಯಾವುದೇ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲು ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿತ್ತು. ಅಂತೆಯೇ ಕಳೆದ ಬಾರಿ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. ಹೀಗಾಗಿ ಈ ಬಾರಿಯ ಪ್ರಸ್ತಾಪ ಏನಾಗಲಿದೆ ಅನ್ನೋದು ತೀವ್ರ ಕುತೂಹಲ ಮೂಡಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಇದ್ದಾರೆ. ಕುಮಾರಸ್ವಾಮಿ ಅವರು ಮೊದಲನಿಂದಲೂ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ವಿರೋಧಿಸುತ್ತ ಬಂದಿದ್ದಾರೆ.
ಈ ಬಗ್ಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರಾಮನಗರ ಹೆಸರು ಬದಲಾವಣೆಯ ಅಧಿಸೂಚನೆ ಇವತ್ತು ಆಗುತ್ತೆ. ಹೆಸರು ಬದಲಾವಣೆ ಮಾಡಲು ಯಾವುದೇ ಹಣ ಖರ್ಚಾಗೋದಿಲ್ಲ. ರಾಮನಗರ ಮೊದಲು ಬೆಂಗಳೂರು ಜಿಲ್ಲೆಗೆ ಸೇರಿತ್ತು. ಕನಕಪುರ, ಚನ್ನಪಟ್ಟಣ ಬೆಂಗಳೂರು ಜಿಲ್ಲೆಗೆ ಸೇರಿತ್ತು. ಹಿಂದೆ ನಾನು ಕೂಡ ಬೆಂಗಳೂರು ಜಿಲ್ಲೆಯ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ. ಬೆಂಗಳೂರು ಹೆಸರು ಉಳಿಸಬೇಕಿತ್ತು. ಅದಕ್ಕಾಗಿ ಹೆಸರು ಬದಲಾವಣೆ ಮಾಡಿದ್ದೇವೆ ಎಂದರು.
ನನ್ನನ್ನ ಕೂಡ ನೀವು ಬೆಂಗಳೂರು ದಕ್ಷಿಣ ಜಿಲ್ಲೆಯವರು ಅಂತ ಕರೆಯಬೇಕು. ಹೆಸರು ಬದಲಾವಣೆಗೆ ಕೇಂದ್ರಕ್ಕೆ ಯಾವುದೇ ಅಧಿಕಾರ ಇರಲಿಲ್ಲ. ಕೇಂದ್ರದ ಗಮನಕ್ಕೆ ತರಬೇಕಿತ್ತು, ಹಾಗಾಗಿ ಹೆಸರನ್ನ ಕಳುಹಿಸಿಕೊಟ್ಟಿದ್ದೆವು ಅಷ್ಟೇ. ವಿಶ್ವದಲ್ಲೇ ಬೆಂಗಳೂರು ದಕ್ಷಿಣ ದೊಡ್ಡದಾಗಿ ಬೆಳೆಯುತ್ತಿದೆ. ಕಾನೂನು ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಹೆಸರು ಬದಲಾವಣೆ ಮಾಡಿದ್ದೇವೆ. ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಇರೋದಿಲ್ಲ. ಈಗ ಹೇಗಿದೆಯೋ ಹಾಗೆಯೇ ಇರಲಿದೆ ಎಂದು ತಿಳಿಸಿದ್ದಾರೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…