‘ಅಮೃತ ಭಾರತ’ ಯೋಜನೆಯಡಿ ₹1,100 ಕೋಟಿ ವೆಚ್ಚದಲ್ಲಿ ನವೀಕರಿಸಿದ 103 ರೈಲು ನಿಲ್ದಾಣಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೊ ಕಾನ್ಸ್ರೆನ್ಸ್ ಮೂಲಕ ನೆರವೇರಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ‘ದೇಶವು ತನ್ನ ರೈಲು ಜಾಲ ಮತ್ತು ಮೂಲಸೌಕರ್ಯವನ್ನು ಆಧುನೀಕರಿಸುತ್ತಿದೆ. ಇದು ದೇಶದ ವೇಗ ಮತ್ತು ಪ್ರಗತಿಯನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.
₹1.100 ಕೋಟಿಗೂ ಹೆಚ್ಚು ವೆಚ್ಚದಲ್ಲಿ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ 86 ಜಿಲ್ಲೆಗಳಲ್ಲಿ ಒಟ್ಟು 103 ನವೀಕರಿಸಿದ ಅಮೃತ ಭಾರತ ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ದೇಶಕ್ಕೆ ಸಮರ್ಪಿಸಿದ್ದಾರೆ. ನವೀಕರಿಸಿದ ರೈಲ್ವೆ ನಿಲ್ದಾಣಗಳು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರಲಿವೆ. ‘ನವೀಕರಣಗೊಂಡ ಈ ರೈಲು ನಿಲ್ದಾಣಗಳು ಅಮೃತ ಭಾರತ ನಿಲ್ದಾಣಗಳೆಂದು ಗುರುತಿಸಲಿವೆ. 100ಕ್ಕೂ ಹೆಚ್ಚು ಅಮೃತ ಭಾರತ ನಿಲ್ದಾಣಗಳ ನವೀಕರಣ ಪೂರ್ಣಗೊಂಡಿವೆ. ಹಿಂದಿನ ಪರಿಸ್ಥಿತಿ ಹೇಗಿತ್ತು ಮತ್ತು ಈಗಿನ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತು ಜನರು ಸಾಮಾಜಿಕ ಮಾಧ್ಯಗಳಲ್ಲಿ ಹಂಚುತ್ತಿದ್ದಾರೆ’ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.
‘ಈ ಅಮೃತ ಭಾರತ ಕೇಂದ್ರಗಳಲ್ಲಿ ಅಭಿವೃದ್ಧಿ ಹಾಗೂ ಪರಂಪರೆ ಸ್ಪಷ್ಟವಾಗಿ ಎದ್ದು ಕಾಣಿಸುತ್ತಿದೆ. ಅವುಗಳು ಸ್ಥಳೀಯ ಕಲೆ ಹಾಗೂ ಸಂಸ್ಕೃತಿಯ ಪ್ರತೀಕವಾಗಿವೆ. ಪ್ರತಿಯೊಂದು ಅಮೃತ ಭಾರತ ನಿಲ್ದಾಣದಲ್ಲಿ ದೇಶದ ಸಾವಿರಾರು ವರ್ಷಗಳ ಹಳೆಯ ಪರಂಪರೆಯನ್ನು ಕಾಣಬಹುದಾಗಿದೆ’ ಎಂದು ಹೇಳಿದ್ದಾರೆ.
‘ಅಮೃತ ಭಾರತ’ ಈ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದ್ದು, ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದಿದ್ದಾರೆ.
ಅಮೃತ ಭಾರತ ಯೋಜನೆ ಅಡಿಯಲ್ಲಿ 1,300ಕ್ಕೂ ಹೆಚ್ಚು ನಿಲ್ದಾಣಗಳನ್ನು ನವೀಕರಿಸಲಾಗುತ್ತಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…