ಬಸ್ ನಿಂದ ಇಳಿಯುವ ವೇಳೆ ಬಸ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದಲ್ಲಿ ನಡೆದಿದೆ.

ಗಾಯಗೊಂಡ ಮಹಿಳೆಯನ್ನು ಲಕ್ಮೀ ಎಂದು ಗುರುತಿಸಲಾಗಿದೆ. ಬಿಸಿರೋಡು ಕಡೆಯಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ನಲ್ಲಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಕಸ್ಬಾ ಗ್ರಾಮದ ತುಂಬ್ಯಾ ಜಂಕ್ಷನ್ ನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದು ಹಿಂದಿನ ಡೋರಿನಲ್ಲಿ ಲಕ್ಮೀ ಎಂಬವರು ಇಳಿಯುತ್ತಿದ್ದಂತೆ ಬಸ್ ನ್ನು ಅದರ ಚಾಲಕ ಮಹಾದೇವಪ್ಪ ಒಮ್ಮೆಲೇ ದುಡುಕತನ ಹಾಗೂ ನಿರ್ಲಕ್ಷ್ಯತನದಿಂದ ಬಸ್ ನ್ನು ಮುಂದೆ ಚಲಾಯಿಸಿದ ಪರಿಣಾಮ ಡಾಮರು ರಸ್ತೆಗೆ ಬಿದ್ದು ಗಾಯವಾಗಿದೆ. ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



