ಕರಾವಳಿ

“ನಿಮ್ಮೆಲ್ಲರ ಆಶೀರ್ವಾದ” ಸಿನಿಮಾ ರಾಜ್ಯಾದ್ಯಂತ ತೆರೆಗೆ!

ಮಂಗಳೂರು: ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಕನ್ನಡ ಸಿನಿಮಾ ಜುಲೈ 21 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಸಿನಿಮಾದ ನಿರ್ಮಾಪಕ ವರುಣ್ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ವೇಳೆ ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಮಾತಾಡಿದ ನಾಯಕ ನಟ ಪ್ರತೀಕ್ ಶೆಟ್ಟಿ ಅವರು, “ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಂದೊಳ್ಳೆ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ಚಿತ್ರೀಕರಣ ಸಂದರ್ಭದಲ್ಲಿ ಸಾಕಷ್ಟು ಎಂಜಾಯ್ ಮಾಡಿಕೊಂಡು ನಟಿಸಿದ್ದೇವೆ. ನೀವೆಲ್ಲರೂ ಆಶೀರ್ವಾದ ಮಾಡಿದರೆ ನಾವು ಇನ್ನಷ್ಟು ಹೊಸ ಪ್ರಯತ್ನಗಳ ಮೂಲಕ ನಿಮ್ಮನ್ನು ರಂಜಿಸಲಿದ್ದೇವೆ” ಎಂದರು.


ಬಳಿಕ ಮಾತಾಡಿದ ಹಿರಿಯ ರಂಗಭೂಮಿ ಕಲಾವಿದ ನಟ ಅರವಿಂದ್ ಬೋಳಾರ್ ಅವರು, “ಬಹುತೇಕ ಸಿನಿಮಾಗಳಲ್ಲಿ ಕಲಾವಿದರಿಗೆ ಪೇಮೆಂಟ್ ಕೊಡುತ್ತಾರೆ ಆದರೆ ನಿರೀಕ್ಷೆಯಷ್ಟು ಗೌರವ ಸಿಗುವುದಿಲ್ಲ. ಆದರೆ ಈ ಸಿನಿಮಾದಲ್ಲಿ ಪ್ರತಿಯೊಬ್ಬ ಕಲಾವಿದರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಸರ್ವಧರ್ಮದ ಚಿತ್ರಪ್ರೇಮಿಗಳು ನಮ್ಮನ್ನು ಬೆಂಬಲಿಸಿ ಸಿನಿಮಾ ನೋಡಿ ಹರಸಬೇಕು. ಹೊಸಬರ ಹೊಸ ಪ್ರಯತ್ನ ಗೆಲ್ಲಬೇಕು” ಎಂದರು.
ಮೈಮ್ ರಾಮದಾಸ್ ಮಾತನಾಡಿ, “ಸಿಂಪಲ್ ಕಥೆಯನ್ನು ಬಹಳ ಸಿಂಪಲ್ ಆಗಿ ನಿರ್ದೇಶಕರು ಸಿನಿಮಾ ಮೂಲಕ ವಿವರಿಸಿದ್ದಾರೆ. ಎಲ್ಲೂ ಉತ್ಪ್ರೇಕ್ಷೆ ಇಲ್ಲದೇ ಸಹಜವಾಗಿ ಸಿನಿಮಾ ಮೂಡಿಬಂದಿದೆ. ಕರಾವಳಿ ಸೊಗಡಿನ ಕಂಪನ್ನು ಸಿನಿಮಾದಲ್ಲಿ ಕಾಣಬಹುದು. ಸಿನಿಮಾ ತಂಡವನ್ನು ಪ್ರೇಕ್ಷಕರು ಗೆಲ್ಲಿಸುವ ಮೂಲಕ ಮುಂದೆ ಹೊಸ ಪ್ರತಿಭೆಗಳಿಗೆ ಅವಕಾಶ ಸಿಗುವಂತಾಗಬೇಕು” ಎಂದರು.
ವಾಲ್ಟರ್ ನಂದಳಿಕೆ ಮಾತು ಮುಂದುವರಿಸಿ, “ಈಗ ಹೆಚ್ಚಿನ ಕನ್ನಡ ಸಿನಿಮಾಗಳಲ್ಲಿ ನಮ್ಮ ಕರಾವಳಿ ಮೂಲದ ನಟರುಗಳೇ ಕಾಣಿಸುತ್ತಿರುವುದು ಸಂತಸದ ವಿಚಾರ. ತುಳುನಾಡಿನ ಜನರು ಯಾವತ್ತೂ ಒಳ್ಳೆಯ ಸಿನಿಮಾಗಳನ್ನು ಸೋಲಲು ಬಿಟ್ಟಿಲ್ಲ. ನಿಮ್ಮೆಲ್ಲರ ಆಶೀರ್ವಾದ ಸಿನಿಮಾ ಥಿಯೇಟರ್ ಪ್ರೇಕ್ಷಕರಿಂದ ತುಂಬಲಿ” ಎಂದು ಶುಭ ಹಾರೈಸಿದರು.
ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ಉದಯ್ ಕುಮಾರ್ ಹೆಗ್ಡೆ, ವರುಣ್ ಹೆಗ್ಡೆ, ನಿರ್ದೇಶಕ ರವಿಕಿರಣ್, ವಾಲ್ಟರ್ ನಂದಳಿಕೆ, ನಟ ಪ್ರತೀಕ್ ಶೆಟ್ಟಿ, ಅರವಿಂದ್ ಬೋಳಾರ್, ಮೈಮ್ ರಾಮದಾಸ್, ಪುರುಷೋತ್ತಮ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.


ಕರಾವಳಿ ಸೊಗಡಿನ ಕಥೆ!

ಸುಂದರ ಕರಾವಳಿಯ ಸೊಗಡಿನ ಒಳ್ಳೆಯ ಜನರಿರುವ ಒಂದು ಸಣ್ಣ ಊರು, ಆ ಊರಿನ ಒಬ್ಬ ಪೊಲೀಸ್ ಅಧಿಕಾರಿ ಸಿನೆಮಾದ ನಾಯಕ ‘ಆಶೀರ್ವಾದ್’. ಅವನು ಹಲವು ಏಳು ಬೀಳುಗಳನ್ನು ಕಂಡು ಹೇಗೆ ಪೋಲಿಸ್ ಆದ ಎನ್ನುವುದೇ ಸಿನಿಮಾದ ಕಥೆ. ಜೊತೆಗೆ ಪಾಯಲ್ ರಾಧಾಕೃಷ್ಣ ಹಾಗೂ ಆಶೀರ್ವಾದನ ನಡುವಿನ ಸುಂದರ ಪ್ರೇಮಕಥೆ ಇದರಲ್ಲಿದೆ ಎಂದು ನಿರ್ದೇಶಕ ರವಿಕಿರಣ್ ತಿಳಿಸಿದರು.


ಹಿರಿಕಿರಿಯ ಕಲಾವಿದರ ಸಮಾಗಮ!

ಕನ್ನಡದ ಮೇರು ನಟಿ ಎಂ ಏನ್ ಲಕ್ಷ್ಮೀದೇವಿ, ಮೈಮ್ ರಾಮದಾಸ್, ಸ್ವಾತಿ ಗುರುದತ್ತ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ, ಸದಾಶಿವ ಅಮೀನ್, ಖಳನಟನಾಗಿ ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು ಮಿಂಚಿದ್ದಾರೆ.
ವರುಣ್ ಸಿನಿ ಕ್ರಿಯೇಷನ್ ಲಾಂಛನದಲ್ಲಿ ವರುಣ್ ಹೆಗ್ಡೆ ನಿರ್ಮಾಣದ ಹೊಣೆ ಹೊತ್ತಿದ್ದಾರೆ, ರವಿಕಿರಣ್ ಕತೆ- ನಿರ್ದೇಶನ, ಸರವಣನ್ ಜಿ ಏನ್ ಛಾಯಾಗ್ರಹಣ, ರಾಷ್ಟ್ರ ಪ್ರಶಸ್ತಿ ವಿಜೇತ ಸುರೇಶ್ ಆರುಮುಗಮ್ ಸಂಕಲನ, ಸುನಾದ್ ಗೌತಮ್ ಸಂಗೀತ , ವಿವೇಕ್ ಚಕ್ರವರ್ತಿ ಹಿನ್ನೆಲೆ ಸಂಗೀತ ಚಿತ್ರದಲ್ಲಿದೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಸುಮಧುರ ಹಾಡುಗಳು ಎಲ್ಲರ ಮನಸೆಳೆದಿದೆ. ರಘು ದೀಕ್ಷಿತ್ ಹಾಡಿರುವ ‘ರಕ್ಷಕ ‘ ಹಾಡಿನ ಮುಖಾಂತರ ‘ನಿಮ್ಮೆಲ್ಲರ ಆಶೀರ್ವಾದ ‘ ಚಿತ್ರತಂಡ ಜನರಿಗಾಗಿ ಹಗಲಿರುಳು ದುಡಿಯುವ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದೆ. ಹಾಡುಗಳಿಗೆ ರಜತ್ ಹೆಗ್ಡೆ, ನಿನಾದ ನಾಯಕ್, ನಿಹಾಲ್ ತಾವ್ರೋ ಧ್ವನಿ ನೀಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

1 day ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

2 days ago

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…

2 days ago

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…

4 days ago

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…

4 days ago

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…

4 days ago