ಜನ ಮನದ ನಾಡಿ ಮಿಡಿತ

Advertisement

ಹಾಸನ: ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ ಮದುವೆ ಬೇಡ ಎಂದು ಹಠ ಹಿಡಿದ ವಧು

ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಇಂದು ನಿಶ್ಚಯವಾಗಿದ್ದ ಮದುವೆ ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಘಟನೆ ವರದಿಯಾಗಿದೆ.

ತಾಳಿ ಕಟ್ಟುವ ವೇಳೆ ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ ಮದುವೆ ಬೇಡ ಎಂದು ಹಠ ಹಿಡಿದ ವಧುವಿನಿಂದ ಕೊನೆಯ ಕ್ಷಣದಲ್ಲಿ ಮದುವೆ ನಿಂತು ಹೋಗಿದೆ. ಹೌದು ಮುಹೂರ್ತದ ವೇಳೆ ಯುವತಿಗೆ ಬಂದ ಕರೆಯಿಂದ ತಕ್ಷಣವೇ ಮದುವೆ ಬೇಡ ಎಂದು ರೂಂಗೆ ಹೋಗಿ ಬಾಗಿಲು ಹಾಕಿಕೊಂಡು ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಳು ಎನ್ನಲಾಗಿದೆ.

ಯುವತಿ ಮನವೊಲಿಸಲು ಪೋಷಕರು ಶತಾಯಗತಾಯ ಪ್ರಯತ್ನಪಟ್ಟರೂ, ಪೋಷಕರ ಮನವೊಲಿಗು ಕ್ಯಾರೆ ಎನ್ನದ ಯುವತಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾಳೆ. ಇನ್ನು ಯುವತಿ ಹಠ ಮಾಡಿದ್ದಕ್ಕೆ ನನಗು ಈ ಮದುವೆ ಬೇಡ ಎಂದ ವರನಿಂದ ಕಡೆ ಗಳಿಗೆಯಲ್ಲಿ ನಿಂತು ಹೋದ ಮದುವೆ. ಇನ್ನು ಮದುಮಗ ಈಶ್ವರಹಳ್ಳಿ ಕೂಡಿಗೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕನಾಗಿದ್ದು, ಪಲ್ಲವಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿಧ್ಯಾರ್ಥಿಯಾಗಿದ್ದಾಳೆ. ಇನ್ನು ಮಗಳ ಈ ವರ್ತನೆಗೆ ಕಣ್ಣೀರಿಟ್ಟ ಪೋಷಕರು ಸ್ಥಿತಿ ದಿಕ್ಕೇ ತೋಚದಂತಾಗಿದೆ. ಇನ್ನು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿದರೂ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗಿಲ್ಲ. ಎನ್ನಲಾಗಿದೆ

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!