ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಇಂದು ನಿಶ್ಚಯವಾಗಿದ್ದ ಮದುವೆ ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಘಟನೆ ವರದಿಯಾಗಿದೆ.
ತಾಳಿ ಕಟ್ಟುವ ವೇಳೆ ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ ಮದುವೆ ಬೇಡ ಎಂದು ಹಠ ಹಿಡಿದ ವಧುವಿನಿಂದ ಕೊನೆಯ ಕ್ಷಣದಲ್ಲಿ ಮದುವೆ ನಿಂತು ಹೋಗಿದೆ. ಹೌದು ಮುಹೂರ್ತದ ವೇಳೆ ಯುವತಿಗೆ ಬಂದ ಕರೆಯಿಂದ ತಕ್ಷಣವೇ ಮದುವೆ ಬೇಡ ಎಂದು ರೂಂಗೆ ಹೋಗಿ ಬಾಗಿಲು ಹಾಕಿಕೊಂಡು ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಳು ಎನ್ನಲಾಗಿದೆ.
ಯುವತಿ ಮನವೊಲಿಸಲು ಪೋಷಕರು ಶತಾಯಗತಾಯ ಪ್ರಯತ್ನಪಟ್ಟರೂ, ಪೋಷಕರ ಮನವೊಲಿಗು ಕ್ಯಾರೆ ಎನ್ನದ ಯುವತಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾಳೆ. ಇನ್ನು ಯುವತಿ ಹಠ ಮಾಡಿದ್ದಕ್ಕೆ ನನಗು ಈ ಮದುವೆ ಬೇಡ ಎಂದ ವರನಿಂದ ಕಡೆ ಗಳಿಗೆಯಲ್ಲಿ ನಿಂತು ಹೋದ ಮದುವೆ. ಇನ್ನು ಮದುಮಗ ಈಶ್ವರಹಳ್ಳಿ ಕೂಡಿಗೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕನಾಗಿದ್ದು, ಪಲ್ಲವಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿಧ್ಯಾರ್ಥಿಯಾಗಿದ್ದಾಳೆ. ಇನ್ನು ಮಗಳ ಈ ವರ್ತನೆಗೆ ಕಣ್ಣೀರಿಟ್ಟ ಪೋಷಕರು ಸ್ಥಿತಿ ದಿಕ್ಕೇ ತೋಚದಂತಾಗಿದೆ. ಇನ್ನು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿದರೂ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗಿಲ್ಲ. ಎನ್ನಲಾಗಿದೆ
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…