ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಇಂದು ನಿಶ್ಚಯವಾಗಿದ್ದ ಮದುವೆ ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಘಟನೆ ವರದಿಯಾಗಿದೆ.
ತಾಳಿ ಕಟ್ಟುವ ವೇಳೆ ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ ಮದುವೆ ಬೇಡ ಎಂದು ಹಠ ಹಿಡಿದ ವಧುವಿನಿಂದ ಕೊನೆಯ ಕ್ಷಣದಲ್ಲಿ ಮದುವೆ ನಿಂತು ಹೋಗಿದೆ. ಹೌದು ಮುಹೂರ್ತದ ವೇಳೆ ಯುವತಿಗೆ ಬಂದ ಕರೆಯಿಂದ ತಕ್ಷಣವೇ ಮದುವೆ ಬೇಡ ಎಂದು ರೂಂಗೆ ಹೋಗಿ ಬಾಗಿಲು ಹಾಕಿಕೊಂಡು ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಳು ಎನ್ನಲಾಗಿದೆ.
ಯುವತಿ ಮನವೊಲಿಸಲು ಪೋಷಕರು ಶತಾಯಗತಾಯ ಪ್ರಯತ್ನಪಟ್ಟರೂ, ಪೋಷಕರ ಮನವೊಲಿಗು ಕ್ಯಾರೆ ಎನ್ನದ ಯುವತಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾಳೆ. ಇನ್ನು ಯುವತಿ ಹಠ ಮಾಡಿದ್ದಕ್ಕೆ ನನಗು ಈ ಮದುವೆ ಬೇಡ ಎಂದ ವರನಿಂದ ಕಡೆ ಗಳಿಗೆಯಲ್ಲಿ ನಿಂತು ಹೋದ ಮದುವೆ. ಇನ್ನು ಮದುಮಗ ಈಶ್ವರಹಳ್ಳಿ ಕೂಡಿಗೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕನಾಗಿದ್ದು, ಪಲ್ಲವಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿಧ್ಯಾರ್ಥಿಯಾಗಿದ್ದಾಳೆ. ಇನ್ನು ಮಗಳ ಈ ವರ್ತನೆಗೆ ಕಣ್ಣೀರಿಟ್ಟ ಪೋಷಕರು ಸ್ಥಿತಿ ದಿಕ್ಕೇ ತೋಚದಂತಾಗಿದೆ. ಇನ್ನು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿದರೂ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗಿಲ್ಲ. ಎನ್ನಲಾಗಿದೆ
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…