ಮಳೆಗಾಲ ಅಡಿ ಇಡುತ್ತಿರುವಂತೆಯೇ ಎರಡನೇ ದಿನವೂ ಟೈಗರ್ ಕಾರ್ಯಾಚರಣೆಯನ್ನು ಮಂಗಳೂರು ಮಹಾ ನಗರ ಪಾಲಿಕೆ ಮುಂದುವರೆಸಿದೆ. ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಮೇರೆಗೆ, ಕಂದಾಯ ಇಲಾಖೆ ಉಪಾಯುಕ್ತರಾದ ಶ್ರೀಮತಿ ಅಕ್ಷತಾ ಕೆ ನೇತೃತ್ವದಲ್ಲಿ ಲೇಡಿಹಿಲ್ ವ್ರತ್ತದಿಂದ ಚಿಲಿಂಬಿ ಆಸುಪಾಸು ರಸ್ತೆ, ಫುಟ್ಪಾತ್ ಸ್ಥಳ ಅತಿಕ್ರಮಣ ಮಾಡಿದ ಬೀದಿಬದಿ ವ್ಯಾಪಾರಸ್ಥರನ್ನು ತೆರವು ಮಾಡಲಾಯಿತು.
ಆಮ್ಲೆಟ್ ಅಂಗಡಿ ಇಟ್ಟು ವ್ಯಾಪಾರ ಮಾಡುವವರ ಸ್ಥಳದಲ್ಲಿ ಬಿಯರ್ ಬಾಟಲುಗಳು ಸಹಿತ ಇತರ ಬಾಟಲುಗಳ ರಾಶಿ ಕಂಡು ಬಂತು.ಬೀದಿ ಬದಿ ಗೂಡಂಗಡಿ ಮೂಲಕ ವ್ಯಾಪಾರ ಮಾಡುವವರು ಆಮ್ಲೆಟ್ ಪೂರೈಸುತ್ತ ಜೊತೆಗೆ ಅಮಲು ಪದಾರ್ಥ ಸೇವನೆಗೂ ಅವಕಾಶ ಕೊಡುತ್ತಿರುವುದು ಇಂದಿನ ಕಾರ್ಯಾಚರಣೆಯಲ್ಲಿ ಸಾರ್ವಜನಿಕವಾಗಿ ಬೆಳಕಿಗೆ ಬಂದಿತು. ಗೂಡಂಗಡಿ ವ್ಯಾಪಾರಿಗಳು ತಮ್ಮಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಕೂಡಾ ಸರಿಯಾಗಿ ನಿರ್ವಹಿಸುತ್ತಿರಲಿಲ್ಲ. ಕುಡಿದು ಬಿಸಾಡಿದ ಬಾಟಲುಗಳಲ್ಲಿ, ಬೊಂಡದ ತ್ಯಾಜ್ಯಗಳಲ್ಲಿ ನೀರು ನಿಂತು ಅವು ಸೊಳ್ಳೆಗಳ ಉತ್ಪಾದನಾ ತಾಣಗಳಾಗಿದ್ದವು.
ಮಳೆಗಾಲದಲ್ಲಿ ಅವು ಮಲೇರಿಯಾ, ಡೆಂಗ್ಯೂ ಮತ್ತಿತರ ಸೊಳ್ಳೆಗಳಿಂದ ಹರಡುವ ರೋಗಗಳಿಗೆ ಅನುಕೂಲಕರ ತಾಣವಾಗಿರುವುದೂ ಕಾರ್ಯಾಚರಣೆ ವೇಳೆ ಕಂಡು ಬಂದಿತು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…