ಮಳೆಗಾಲ ಅಡಿ ಇಡುತ್ತಿರುವಂತೆಯೇ ಎರಡನೇ ದಿನವೂ ಟೈಗರ್ ಕಾರ್ಯಾಚರಣೆಯನ್ನು ಮಂಗಳೂರು ಮಹಾ ನಗರ ಪಾಲಿಕೆ ಮುಂದುವರೆಸಿದೆ. ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಮೇರೆಗೆ, ಕಂದಾಯ ಇಲಾಖೆ ಉಪಾಯುಕ್ತರಾದ ಶ್ರೀಮತಿ ಅಕ್ಷತಾ ಕೆ ನೇತೃತ್ವದಲ್ಲಿ ಲೇಡಿಹಿಲ್ ವ್ರತ್ತದಿಂದ ಚಿಲಿಂಬಿ ಆಸುಪಾಸು ರಸ್ತೆ, ಫುಟ್ಪಾತ್ ಸ್ಥಳ ಅತಿಕ್ರಮಣ ಮಾಡಿದ ಬೀದಿಬದಿ ವ್ಯಾಪಾರಸ್ಥರನ್ನು ತೆರವು ಮಾಡಲಾಯಿತು.
ಆಮ್ಲೆಟ್ ಅಂಗಡಿ ಇಟ್ಟು ವ್ಯಾಪಾರ ಮಾಡುವವರ ಸ್ಥಳದಲ್ಲಿ ಬಿಯರ್ ಬಾಟಲುಗಳು ಸಹಿತ ಇತರ ಬಾಟಲುಗಳ ರಾಶಿ ಕಂಡು ಬಂತು.ಬೀದಿ ಬದಿ ಗೂಡಂಗಡಿ ಮೂಲಕ ವ್ಯಾಪಾರ ಮಾಡುವವರು ಆಮ್ಲೆಟ್ ಪೂರೈಸುತ್ತ ಜೊತೆಗೆ ಅಮಲು ಪದಾರ್ಥ ಸೇವನೆಗೂ ಅವಕಾಶ ಕೊಡುತ್ತಿರುವುದು ಇಂದಿನ ಕಾರ್ಯಾಚರಣೆಯಲ್ಲಿ ಸಾರ್ವಜನಿಕವಾಗಿ ಬೆಳಕಿಗೆ ಬಂದಿತು. ಗೂಡಂಗಡಿ ವ್ಯಾಪಾರಿಗಳು ತಮ್ಮಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಕೂಡಾ ಸರಿಯಾಗಿ ನಿರ್ವಹಿಸುತ್ತಿರಲಿಲ್ಲ. ಕುಡಿದು ಬಿಸಾಡಿದ ಬಾಟಲುಗಳಲ್ಲಿ, ಬೊಂಡದ ತ್ಯಾಜ್ಯಗಳಲ್ಲಿ ನೀರು ನಿಂತು ಅವು ಸೊಳ್ಳೆಗಳ ಉತ್ಪಾದನಾ ತಾಣಗಳಾಗಿದ್ದವು.
ಮಳೆಗಾಲದಲ್ಲಿ ಅವು ಮಲೇರಿಯಾ, ಡೆಂಗ್ಯೂ ಮತ್ತಿತರ ಸೊಳ್ಳೆಗಳಿಂದ ಹರಡುವ ರೋಗಗಳಿಗೆ ಅನುಕೂಲಕರ ತಾಣವಾಗಿರುವುದೂ ಕಾರ್ಯಾಚರಣೆ ವೇಳೆ ಕಂಡು ಬಂದಿತು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…