ಪ್ರತಿಭಾ ಸೌನ್ಷಿಮಟ್ ಇನಿಶಿಯೇಟಿವ್, ಪಾತ್ ವೇ ಎಂಟರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯು ಮೇ.25ರಂದು ಸಂಜೆ 3 ರಿಂದ ನಗರದ ಉಳಾಯಿಬೆಟ್ಟು ಪೆರ್ಮಂಕಿ ಆಸ್ಕರ್ ಕ್ಲಬ್ನಲ್ಲಿ ನಡೆಯಲಿದೆ.
ಈ ಬಗ್ಗೆ ಮಿಸೆಸ್ ಇಂಡಿಯಾ ಪ್ರಾದೇಶಿಕ ನಿರ್ದೇಶಕರಾದ ಪಾತ್ವೇ ಎಂಟರ್ಪ್ರೈಸಸ್ ಮಾಲಕ ದೀಪಕ್ ಗಂಗೂಲಿ ಮಾತನಾಡಿ, 3 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು ಈಗಾಗಲೇ ಒಟ್ಟು 27 ಸ್ಪರ್ದಿಗಳು ಅಂತಿಮ ಸುತ್ತಿಗೆ ಆಯ್ಕೆ ಆಗಿದ್ದಾರೆ. ಕಾರ್ಯಕ್ರಮದ ತೀರ್ಪುಗಾರಿಕೆಯನ್ನು ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿ ಕಿರೀಟ ಪಡೆದ ವಿಜೇತರಿಂದ ನಡೆಯಲಿದೆ. ಇಲ್ಲಿ ಭಾಗವಹಿಸಿ ಸ್ಪರ್ಧಿಸಿದ ವಿಜೇತರಿಗೆ ಮತ್ತುಸ್ಪರ್ದಿಗಳಿಗೆ ಇದು ಪ್ರತಿಭಾ ಪ್ರದರ್ಶನಕ್ಕೆ ಇರುವ ಉತ್ತಮ ವೇದಿಕೆಯಾಗಲಿದೆ ಎಂದಿದ್ದಾರೆ. ಇನ್ನು ಈ ಸುದ್ದ್ದಿಗೋಷ್ಠಿಯಲ್ಲಿ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಸಲೂನ್ ಮಾಲಕರಾದ ಮರ್ಸಿ ವೀಣಾ ಡಿಸೋಜಾ, ಮಿಸೆಸ್ ಇಂಡಿಯಾ ಅಂತಾರಾಷ್ಟ್ರೀಯ ಕಿರೀಟ ವಿಜೇತೆ ನಿಶಿತಾ ಜೆ.ಶೆಟ್ಟಿಯಾನ್, ಪಾತ್ವೇ ಎಂಟರ್ ಪ್ರೈಸಸ್ ಪಾರ್ಟ್ನರ್ ಅನೀಶಾ ಅಂಜೆಲಿನಾ ಗಂಗೂಲಿ, ಟ್ರೈನರ್ ರಕ್ಷಿತಾ ನಾಯರ್ ಉಪಸ್ಥಿತರಿದ್ರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…