ಪ್ರತಿಭಾ ಸೌನ್ಷಿಮಟ್ ಇನಿಶಿಯೇಟಿವ್, ಪಾತ್ ವೇ ಎಂಟರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯು ಮೇ.25ರಂದು ಸಂಜೆ 3 ರಿಂದ ನಗರದ ಉಳಾಯಿಬೆಟ್ಟು ಪೆರ್ಮಂಕಿ ಆಸ್ಕರ್ ಕ್ಲಬ್ನಲ್ಲಿ ನಡೆಯಲಿದೆ.
ಈ ಬಗ್ಗೆ ಮಿಸೆಸ್ ಇಂಡಿಯಾ ಪ್ರಾದೇಶಿಕ ನಿರ್ದೇಶಕರಾದ ಪಾತ್ವೇ ಎಂಟರ್ಪ್ರೈಸಸ್ ಮಾಲಕ ದೀಪಕ್ ಗಂಗೂಲಿ ಮಾತನಾಡಿ, 3 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು ಈಗಾಗಲೇ ಒಟ್ಟು 27 ಸ್ಪರ್ದಿಗಳು ಅಂತಿಮ ಸುತ್ತಿಗೆ ಆಯ್ಕೆ ಆಗಿದ್ದಾರೆ. ಕಾರ್ಯಕ್ರಮದ ತೀರ್ಪುಗಾರಿಕೆಯನ್ನು ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿ ಕಿರೀಟ ಪಡೆದ ವಿಜೇತರಿಂದ ನಡೆಯಲಿದೆ. ಇಲ್ಲಿ ಭಾಗವಹಿಸಿ ಸ್ಪರ್ಧಿಸಿದ ವಿಜೇತರಿಗೆ ಮತ್ತುಸ್ಪರ್ದಿಗಳಿಗೆ ಇದು ಪ್ರತಿಭಾ ಪ್ರದರ್ಶನಕ್ಕೆ ಇರುವ ಉತ್ತಮ ವೇದಿಕೆಯಾಗಲಿದೆ ಎಂದಿದ್ದಾರೆ. ಇನ್ನು ಈ ಸುದ್ದ್ದಿಗೋಷ್ಠಿಯಲ್ಲಿ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಸಲೂನ್ ಮಾಲಕರಾದ ಮರ್ಸಿ ವೀಣಾ ಡಿಸೋಜಾ, ಮಿಸೆಸ್ ಇಂಡಿಯಾ ಅಂತಾರಾಷ್ಟ್ರೀಯ ಕಿರೀಟ ವಿಜೇತೆ ನಿಶಿತಾ ಜೆ.ಶೆಟ್ಟಿಯಾನ್, ಪಾತ್ವೇ ಎಂಟರ್ ಪ್ರೈಸಸ್ ಪಾರ್ಟ್ನರ್ ಅನೀಶಾ ಅಂಜೆಲಿನಾ ಗಂಗೂಲಿ, ಟ್ರೈನರ್ ರಕ್ಷಿತಾ ನಾಯರ್ ಉಪಸ್ಥಿತರಿದ್ರು.
ತಿರುವೈಲು ಗುತ್ತುವಿನ 'ದೂಜ' ಹೆಸರಿನ ಕಂಬಳ ಕೋಣ ಶಾಂಭವಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಹಲವಾರು ಬಹುಮಾನಗಳನ್ನು…
ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಸಂಜೆ, ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ…
ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…