ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ) ಮಂಗಳೂರು ವಿಭಾಗವು ತುಳುನಾಡಿನ ವೀರರಾಣಿ ಅಬ್ಬಕ್ಕಳ 500 ವರ್ಷದ ಸ್ಮರಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಮತ್ತು ಉಪನ್ಯಾಸಕ ವೃಂದದಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ರಾಣಿ ಅಬ್ಬಕ್ಕ @500 ಎನ್ನುವ ಉಪನ್ಯಾಸ ಕಾರ್ಯಕ್ರಮವನ್ನು ಮೇ 27ರಂದು ಎಸ್ಸಿಎಸ್ ಕಾಲೇಜಿನಲ್ಲಿ ನಡೆಯಲಿದೆಂದು ವೆಂಕಟೇಶ್ ನಾಯಕ್ ತಿಳಿಸಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಪ್ರಧಾನ ಜಂಟಿ ಕಾರ್ಯದರ್ಶಿಗಳಾದ ಡಾ. ಮಾಧವ ಎಂ.ಕೆ. `ಭಾರತ ವರ್ಷದ ವೀರರಾಣಿಯರ ಸ್ಮರಣೆ ” ಎನ್ನುವ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದ್ದು. ಈ ಮಣ್ಣಿನ ಮಹಿಮೆಯನ್ನು ಘನತೆಯನ್ನು ಸಾರುವ ವಿಚಾರ ಸಂಕಿರಣ ಇದಾಗಲಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಪ್ರೊ ವಾಣಿ, ಸಂಧ್ಯಾ ಆಳ್ವ, ಡಾ ಬಾಲಕೃಷ್ಣ ಭಾರದ್ವಾಜ್ ಮುಂತಾದವರು ಉಪಸ್ಥಿತರಿದ್ರು.



