ಜನ ಮನದ ನಾಡಿ ಮಿಡಿತ

Advertisement

ಮೈಸೂರು: ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ; ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು. ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಪತ್ರರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬ0ಧಿಸಿದ0ತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!