ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು. ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಪತ್ರರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬ0ಧಿಸಿದ0ತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…