ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಜೂ.1ರಂದು ನಡೆಯಲಿರುವ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಮಹಾ ಅಧಿವೇಶನ

2024ರ ಅ.30ರಂದು ನೋಂದಾವಣೆಗೊ0ಡು ಅಸ್ತಿತ್ವಕ್ಕೆ ಬಂದಿರುವ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಮಹಾ ಅಧಿವೇಶನವು ಜೂ.1ರಂದು ಬೆಳಿಗ್ಗೆ ಗಂಟೆ 10 ರಿಂದ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳನ್ನು ಅಭಿನಂದಿಸಲಾಗುತ್ತದೆ ಎಂದು ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಸಂಘ ನೋಂದಾವಣೆಗೊ0ಡು ಅಸ್ತಿತ್ವಕ್ಕೆ ಬಂದ ಒಂದು ವರ್ಷದ ಹೊತ್ತಿಗೆ ಸರ್ವ ಸದಸ್ಯರ ಮಹಾಅಧಿವೇಶನ ನಡೆಸಬೇಕೆಂದು ತೀರ್ಮಾನಿಸಿದಂತೆ ಈ ಕಾರ್ಯಕ್ರಮ ನಡೆಯಲಿದೆ. ಈ ಹಿಂದೆ ಸುಳ್ಯದಲ್ಲಿ ದೊಡ್ಡ ಸಭೆ ನಡೆಸುವುದೆಂದು ತೀರ್ಮಾನಿಸಿದ್ದೆವು. ಕಾರಣಾಂತರಗಳಿAದ ಅದು ಮುಂದೂಡಲ್ಪಟ್ಟಿತ್ತು. ಈಗ ಪುತ್ತೂರಿನಲ್ಲಿ ದೊಡ್ಡ ಮಟ್ಟದ ಸಭೆ ನಡೆಸಲಿದ್ದೇವೆ. ಪ್ರಥಮ ಮಹಾಅಧಿವೇಶನವನ್ನು ರಾಜ್ಯ ಒಕ್ಕಲಿಗರ ಸಂಘದ ಮಾಜಿ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ ಕೆ.ವಿ ಅವರು ಉದ್ಘಾಟಿಸಲಿದ್ದಾರೆ. ಎಲ್ಲಾ ತಾಲೂಕು ಸಂಘದ ಅಧ್ಯಕ್ಷರು ಗೌರವ ಉಪಸ್ಥಿತಿಯಲ್ಲಿರುತ್ತಾರೆ. ಸಭೆಯಲ್ಲಿ ಸಂಘದ ಗೌರವ ಸಲಹೆಗಾರರು, ನಿರ್ದೇಶಕರು ಸಹಿತ ಒಟ್ಟು 103 ಮಂದಿ ಆಡಳಿತ ಮಂಡಳಿ ಸದಸ್ಯರನ್ನು ಸಮಾಜಕ್ಕೆ ಗುರುತಿಸುವ ನೆಲೆಯಲ್ಲಿ ಅವರನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಲಿದೆ ಎಂದವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಕೋಶಾಧಿಕಾರಿ ಹೆಚ್ ಪದ್ಮಗೌಡ ಬೆಳ್ತಂಗಡಿ, ಉಪಾಧ್ಯಕ್ಷ ರಾಮದಾಸ್ ಗೌಡ ಎಸ್, ಬೆಳ್ತಂಗಡಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಕಿಶೋರ್ ಕುಮಾರ್ ನೆಲ್ಲಿಕಟ್ಟೆ, ಮಂಗಳೂರು ಕಾರ್ಯದರ್ಶಿ ಕೆ.ರಾಮಣ್ಣ ಗೌಡ, ಸಂಘದ ಸದಸ್ಯತನ ಅಭಿಯಾನದ ಪುತ್ತೂರು ತಾಲೂಕು ಸಂಚಾಲಕ ಮುರಳೀಧರ ಗೌಡ ಕೆಮ್ಮಾರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!