ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಾಮನಗರ ಹೆಸರು ತೆಗೆದು, ಬೆಂಗಳೂರು ಸೇರಿಸಿರುವುದೇ ಲ್ಯಾಂಡ್ ಮಾಫಿಯಾ ಕಾರಣಕ್ಕೆ..!??

ಬೆಂಗಳೂರು ಅನ್ನುವ ಪದದಲ್ಲಿ ಲ್ಯಾಂಡ್ ಮಾಫಿಯಾ ಇದೆ. ರಾಮನಗರ ಹೆಸರು ತೆಗೆದು, ಬೆಂಗಳೂರು ಸೇರಿಸಿರುವುದೇ ಲ್ಯಾಂಡ್ ಮಾಫಿಯಾ ಕಾರಣಕ್ಕಾಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಸುಳ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಸುತ್ತಮುತ್ತ ಯಾರು ಲ್ಯಾಂಡ್ ಮಾಫಿಯಾ ನಡೆಸುತ್ತಿದ್ದಾರೆ. ಅವರಿಗೆ ರಾಮನಗರ ಹೆಸರು ಬೇಕಾಗಿಲ್ಲ. ಅವರಿಗೆ ಬೆಂಗಳೂರು ಹೆಸರು ಬೇಕು. ಅವರ ಜಮೀನಿಗೆ ಮೌಲ್ಯ ಬರಬೇಕು. ಈ ಕಾರಣಕ್ಕಾಗಿ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಲಾಗಿದೆ. ಲ್ಯಾಂಡ್ ಮಾಫಿಯಾದ ಶಕ್ತಿಗಳು, ದೊಡ್ಡ ದೊಡ್ಡ ಕುಳಗಳು ಇವತ್ತು ರಾಮನಗರ ಹೆಸರು ತೆಗೆದು ಬೆಂಗಳೂರು ಎಂಬ ಹೆಸರು ಇಡುತ್ತಿದ್ದಾರೆ ಇದರ ಹಿಂದೆ ಲ್ಯಾಂಡ್ ಮಾಫಿಯಾ ಇದೆ. ಇತರ ಹಿಂದೆ ಇರುವುದು ರೈತರ ಜಮೀನು ಕಿತ್ತುಕೊಂಡು, ಬೇರೆಯವರಿಗೆ ಕೊಡುವಂತಹದ್ದು, ಲೇಔಟ್ ಮಾಡುವಂತಹದ್ದು, ಕೈಗಾರಿಕೆಗಳಿಗೆ ಕೊಡುವ ದೊಡ್ಡ ಶಕ್ತಿ, ಷಡ್ಯಂತ್ರ ಇದೆ. ಆದ್ದರಿಂದ ರಾಮನಗರ ಹೆಸರು ಹಾಗಯೇ ಉಳಿದ ಬೇಕು ಎಂದು ನಾನು ಆಗ್ರಹಿಸುವುದಾಗಿ ತಿಳಿಸಿದ ಅವರು, ಆ ಜಿಲ್ಲೆಯವರು ಇದಕ್ಕೆ ಶಕ್ತಿ ನೀಡಬೇಕು ಎಂದು ಆ ಜಿಲ್ಲೆಯ ಜನರಲ್ಲಿ ಆಗ್ರಹ ಮಾಡುತ್ತೇನೆ ಎಂದ್ರು. ಕರ್ನಾಟಕ ರಾಜ್ಯ ಸರಕಾರ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಅವರು ಖಂಡಿಸಿದ್ರು. ಜನೌಷಧಿ ರೋಗಿಗಳಿಗೆ ಮಾತ್ರವಲ್ಲ, ಆಸ್ಪತ್ರೆಗೆ ಬರುವವರು, ಅಕ್ಕಪಕ್ಕದವರಿಗೆ ಪ್ರಯೋಜನವಾಗುತ್ತಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!