ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಾಮನಗರ ಹೆಸರು ತೆಗೆದು, ಬೆಂಗಳೂರು ಸೇರಿಸಿರುವುದೇ ಲ್ಯಾಂಡ್ ಮಾಫಿಯಾ ಕಾರಣಕ್ಕೆ..!??

ಬೆಂಗಳೂರು ಅನ್ನುವ ಪದದಲ್ಲಿ ಲ್ಯಾಂಡ್ ಮಾಫಿಯಾ ಇದೆ. ರಾಮನಗರ ಹೆಸರು ತೆಗೆದು, ಬೆಂಗಳೂರು ಸೇರಿಸಿರುವುದೇ ಲ್ಯಾಂಡ್ ಮಾಫಿಯಾ ಕಾರಣಕ್ಕಾಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಸುಳ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಸುತ್ತಮುತ್ತ ಯಾರು ಲ್ಯಾಂಡ್ ಮಾಫಿಯಾ ನಡೆಸುತ್ತಿದ್ದಾರೆ. ಅವರಿಗೆ ರಾಮನಗರ ಹೆಸರು ಬೇಕಾಗಿಲ್ಲ. ಅವರಿಗೆ ಬೆಂಗಳೂರು ಹೆಸರು ಬೇಕು. ಅವರ ಜಮೀನಿಗೆ ಮೌಲ್ಯ ಬರಬೇಕು. ಈ ಕಾರಣಕ್ಕಾಗಿ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಲಾಗಿದೆ. ಲ್ಯಾಂಡ್ ಮಾಫಿಯಾದ ಶಕ್ತಿಗಳು, ದೊಡ್ಡ ದೊಡ್ಡ ಕುಳಗಳು ಇವತ್ತು ರಾಮನಗರ ಹೆಸರು ತೆಗೆದು ಬೆಂಗಳೂರು ಎಂಬ ಹೆಸರು ಇಡುತ್ತಿದ್ದಾರೆ ಇದರ ಹಿಂದೆ ಲ್ಯಾಂಡ್ ಮಾಫಿಯಾ ಇದೆ. ಇತರ ಹಿಂದೆ ಇರುವುದು ರೈತರ ಜಮೀನು ಕಿತ್ತುಕೊಂಡು, ಬೇರೆಯವರಿಗೆ ಕೊಡುವಂತಹದ್ದು, ಲೇಔಟ್ ಮಾಡುವಂತಹದ್ದು, ಕೈಗಾರಿಕೆಗಳಿಗೆ ಕೊಡುವ ದೊಡ್ಡ ಶಕ್ತಿ, ಷಡ್ಯಂತ್ರ ಇದೆ. ಆದ್ದರಿಂದ ರಾಮನಗರ ಹೆಸರು ಹಾಗಯೇ ಉಳಿದ ಬೇಕು ಎಂದು ನಾನು ಆಗ್ರಹಿಸುವುದಾಗಿ ತಿಳಿಸಿದ ಅವರು, ಆ ಜಿಲ್ಲೆಯವರು ಇದಕ್ಕೆ ಶಕ್ತಿ ನೀಡಬೇಕು ಎಂದು ಆ ಜಿಲ್ಲೆಯ ಜನರಲ್ಲಿ ಆಗ್ರಹ ಮಾಡುತ್ತೇನೆ ಎಂದ್ರು. ಕರ್ನಾಟಕ ರಾಜ್ಯ ಸರಕಾರ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಅವರು ಖಂಡಿಸಿದ್ರು. ಜನೌಷಧಿ ರೋಗಿಗಳಿಗೆ ಮಾತ್ರವಲ್ಲ, ಆಸ್ಪತ್ರೆಗೆ ಬರುವವರು, ಅಕ್ಕಪಕ್ಕದವರಿಗೆ ಪ್ರಯೋಜನವಾಗುತ್ತಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!