ಇತರೆ

ಮಂಗಳೂರು: ರಾಮನಗರ ಹೆಸರು ತೆಗೆದು, ಬೆಂಗಳೂರು ಸೇರಿಸಿರುವುದೇ ಲ್ಯಾಂಡ್ ಮಾಫಿಯಾ ಕಾರಣಕ್ಕೆ..!??

ಬೆಂಗಳೂರು ಅನ್ನುವ ಪದದಲ್ಲಿ ಲ್ಯಾಂಡ್ ಮಾಫಿಯಾ ಇದೆ. ರಾಮನಗರ ಹೆಸರು ತೆಗೆದು, ಬೆಂಗಳೂರು ಸೇರಿಸಿರುವುದೇ ಲ್ಯಾಂಡ್ ಮಾಫಿಯಾ ಕಾರಣಕ್ಕಾಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಸುಳ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಸುತ್ತಮುತ್ತ ಯಾರು ಲ್ಯಾಂಡ್ ಮಾಫಿಯಾ ನಡೆಸುತ್ತಿದ್ದಾರೆ. ಅವರಿಗೆ ರಾಮನಗರ ಹೆಸರು ಬೇಕಾಗಿಲ್ಲ. ಅವರಿಗೆ ಬೆಂಗಳೂರು ಹೆಸರು ಬೇಕು. ಅವರ ಜಮೀನಿಗೆ ಮೌಲ್ಯ ಬರಬೇಕು. ಈ ಕಾರಣಕ್ಕಾಗಿ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಲಾಗಿದೆ. ಲ್ಯಾಂಡ್ ಮಾಫಿಯಾದ ಶಕ್ತಿಗಳು, ದೊಡ್ಡ ದೊಡ್ಡ ಕುಳಗಳು ಇವತ್ತು ರಾಮನಗರ ಹೆಸರು ತೆಗೆದು ಬೆಂಗಳೂರು ಎಂಬ ಹೆಸರು ಇಡುತ್ತಿದ್ದಾರೆ ಇದರ ಹಿಂದೆ ಲ್ಯಾಂಡ್ ಮಾಫಿಯಾ ಇದೆ. ಇತರ ಹಿಂದೆ ಇರುವುದು ರೈತರ ಜಮೀನು ಕಿತ್ತುಕೊಂಡು, ಬೇರೆಯವರಿಗೆ ಕೊಡುವಂತಹದ್ದು, ಲೇಔಟ್ ಮಾಡುವಂತಹದ್ದು, ಕೈಗಾರಿಕೆಗಳಿಗೆ ಕೊಡುವ ದೊಡ್ಡ ಶಕ್ತಿ, ಷಡ್ಯಂತ್ರ ಇದೆ. ಆದ್ದರಿಂದ ರಾಮನಗರ ಹೆಸರು ಹಾಗಯೇ ಉಳಿದ ಬೇಕು ಎಂದು ನಾನು ಆಗ್ರಹಿಸುವುದಾಗಿ ತಿಳಿಸಿದ ಅವರು, ಆ ಜಿಲ್ಲೆಯವರು ಇದಕ್ಕೆ ಶಕ್ತಿ ನೀಡಬೇಕು ಎಂದು ಆ ಜಿಲ್ಲೆಯ ಜನರಲ್ಲಿ ಆಗ್ರಹ ಮಾಡುತ್ತೇನೆ ಎಂದ್ರು. ಕರ್ನಾಟಕ ರಾಜ್ಯ ಸರಕಾರ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಅವರು ಖಂಡಿಸಿದ್ರು. ಜನೌಷಧಿ ರೋಗಿಗಳಿಗೆ ಮಾತ್ರವಲ್ಲ, ಆಸ್ಪತ್ರೆಗೆ ಬರುವವರು, ಅಕ್ಕಪಕ್ಕದವರಿಗೆ ಪ್ರಯೋಜನವಾಗುತ್ತಿದೆ ಎಂದಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

3 hours ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

9 hours ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

9 hours ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago