ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಲೊರೆಟ್ಟೊ ಕಮಲ್ ಕಟ್ಟೆ ಎಂಬಲ್ಲಿ ಬೃಹತ್ ಗಾತ್ರದ ಬಂಡೆ ಕಲ್ಲು ರಸ್ತೆಗೆ ಬಿದ್ದರೂ ತೆರವುಗೊಳಿಸದ ಇಲಾಖೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಂಟ್ವಾಳ ಮೂಡಬಿದಿರೆ ರಸ್ತೆಯಲ್ಲಿ ಲೊರೆಟ್ಟೊ ಕಮಲ್ ಕಟ್ಟೆ ಎಂಬಲ್ಲಿ ಬೃಹತ್ ಗಾತ್ರದ ಬಂಡೆ ಕಲ್ಲು ರಸ್ತೆಗೆ ಬಿದ್ದು ಎರಡು ದಿವಸಗಳಾದರೂ ಸಂಬ0ಧ ಪಟ್ಟ ಇಲಾಖೆಯಿಂದ ತೆರವು ಮಾಡುವ ಕಾರ್ಯ ನಡೆದಿಲ್ಲ ಎಂಬ ಅರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಕಮಲ್ ಕಟ್ಟೆ ಎಂಬಲ್ಲಿ ಗುಡ್ಡವನ್ನು ಅಗೆದು ಮಣ್ಣು ತೆಗೆಯಲಾಗಿದೆ. ಅ ಗುಡ್ಡದ ಮೇಲಿದ್ದ ಎರಡು ಕಲ್ಲುಬಂಡೆಗಳು ರಸ್ತೆಗೆ ಉರುಳಿ ಬಿದ್ದಿದೆ. ಒಂದು ಬಂಡೆ ರಸ್ತೆಯ ಮೇಲೆ ಸಂಚಾರಕ್ಕೆ ಅಡಚಣೆಯನ್ನು ಉಂಟುಮಾಡಿದರೆ ಇನ್ನೊಂದು ಕಲ್ಲು ರಸ್ತೆಯ ಬದಿಯಲ್ಲಿ ಬಿದ್ದಿದೆ. ಇದರ ಜೊತೆಗೆ ಜಾಹಿರಾತು ಫಲಕದ ಕಂಬವೊ0ದು ರಸ್ತೆಗೆ ಬಿದ್ದಿದೆ. ಕಲ್ಲುಬಂಡೆ ಹಾಗೂ ಜಾಹೀರಾತು ಫಲಕದ ಕಂಬ ಎರಡು ಕೂಡ ರಸ್ತೆಯ ಮೇಲೆ ಬಿದ್ದು ಅಪಾಯವನ್ನು ಆಹ್ವಾನಿಸುತ್ತಿದೆ. ಈ ರಸ್ತೆಯಲ್ಲಿ ಅತೀ ಹೆಚ್ಚು ವಾಹನಗಳು ಸಂಚಾರ ಮಾಡುತ್ತಿದ್ದು ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ಜೀವಕ್ಕೆ ಅಪಾಯ ಆಗುವ ಸಾಧ್ಯತೆಗಳು ಹೆಚ್ಚು ಇವೆ. ಹಾಗಾಗಿ ಎರಡು ದಿನಗಳಿಂದ ನಿರ್ಲಕ್ಷ್ಯವಹಿಸಿರುವ ಇಲಾಖೆಯ ಬಗ್ಗೆ ಸಾರ್ವಜನಿಕರು ಅಪಸ್ವರ ಎತ್ತಿದ್ದಾರೆ. ಅಪಾಯ ಆಗುವ ಮುನ್ನ ಇಲಾಖೆ ಎಚ್ಚೆತ್ತುಕೊಂಡು ಸಮಸ್ಯೆಗೆ ಮುಕ್ತಿನೀಡುವಂತೆ ಸಾರ್ವಜನಿಕ ಮನವಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!