ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಲೊರೆಟ್ಟೊ ಕಮಲ್ ಕಟ್ಟೆ ಎಂಬಲ್ಲಿ ಬೃಹತ್ ಗಾತ್ರದ ಬಂಡೆ ಕಲ್ಲು ರಸ್ತೆಗೆ ಬಿದ್ದರೂ ತೆರವುಗೊಳಿಸದ ಇಲಾಖೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಂಟ್ವಾಳ ಮೂಡಬಿದಿರೆ ರಸ್ತೆಯಲ್ಲಿ ಲೊರೆಟ್ಟೊ ಕಮಲ್ ಕಟ್ಟೆ ಎಂಬಲ್ಲಿ ಬೃಹತ್ ಗಾತ್ರದ ಬಂಡೆ ಕಲ್ಲು ರಸ್ತೆಗೆ ಬಿದ್ದು ಎರಡು ದಿವಸಗಳಾದರೂ ಸಂಬ0ಧ ಪಟ್ಟ ಇಲಾಖೆಯಿಂದ ತೆರವು ಮಾಡುವ ಕಾರ್ಯ ನಡೆದಿಲ್ಲ ಎಂಬ ಅರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಕಮಲ್ ಕಟ್ಟೆ ಎಂಬಲ್ಲಿ ಗುಡ್ಡವನ್ನು ಅಗೆದು ಮಣ್ಣು ತೆಗೆಯಲಾಗಿದೆ. ಅ ಗುಡ್ಡದ ಮೇಲಿದ್ದ ಎರಡು ಕಲ್ಲುಬಂಡೆಗಳು ರಸ್ತೆಗೆ ಉರುಳಿ ಬಿದ್ದಿದೆ. ಒಂದು ಬಂಡೆ ರಸ್ತೆಯ ಮೇಲೆ ಸಂಚಾರಕ್ಕೆ ಅಡಚಣೆಯನ್ನು ಉಂಟುಮಾಡಿದರೆ ಇನ್ನೊಂದು ಕಲ್ಲು ರಸ್ತೆಯ ಬದಿಯಲ್ಲಿ ಬಿದ್ದಿದೆ. ಇದರ ಜೊತೆಗೆ ಜಾಹಿರಾತು ಫಲಕದ ಕಂಬವೊ0ದು ರಸ್ತೆಗೆ ಬಿದ್ದಿದೆ. ಕಲ್ಲುಬಂಡೆ ಹಾಗೂ ಜಾಹೀರಾತು ಫಲಕದ ಕಂಬ ಎರಡು ಕೂಡ ರಸ್ತೆಯ ಮೇಲೆ ಬಿದ್ದು ಅಪಾಯವನ್ನು ಆಹ್ವಾನಿಸುತ್ತಿದೆ. ಈ ರಸ್ತೆಯಲ್ಲಿ ಅತೀ ಹೆಚ್ಚು ವಾಹನಗಳು ಸಂಚಾರ ಮಾಡುತ್ತಿದ್ದು ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ಜೀವಕ್ಕೆ ಅಪಾಯ ಆಗುವ ಸಾಧ್ಯತೆಗಳು ಹೆಚ್ಚು ಇವೆ. ಹಾಗಾಗಿ ಎರಡು ದಿನಗಳಿಂದ ನಿರ್ಲಕ್ಷ್ಯವಹಿಸಿರುವ ಇಲಾಖೆಯ ಬಗ್ಗೆ ಸಾರ್ವಜನಿಕರು ಅಪಸ್ವರ ಎತ್ತಿದ್ದಾರೆ. ಅಪಾಯ ಆಗುವ ಮುನ್ನ ಇಲಾಖೆ ಎಚ್ಚೆತ್ತುಕೊಂಡು ಸಮಸ್ಯೆಗೆ ಮುಕ್ತಿನೀಡುವಂತೆ ಸಾರ್ವಜನಿಕ ಮನವಿಯಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!