ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಂಟ್ವಾಳ ಮೂಡಬಿದಿರೆ ರಸ್ತೆಯಲ್ಲಿ ಲೊರೆಟ್ಟೊ ಕಮಲ್ ಕಟ್ಟೆ ಎಂಬಲ್ಲಿ ಬೃಹತ್ ಗಾತ್ರದ ಬಂಡೆ ಕಲ್ಲು ರಸ್ತೆಗೆ ಬಿದ್ದು ಎರಡು ದಿವಸಗಳಾದರೂ ಸಂಬ0ಧ ಪಟ್ಟ ಇಲಾಖೆಯಿಂದ ತೆರವು ಮಾಡುವ ಕಾರ್ಯ ನಡೆದಿಲ್ಲ ಎಂಬ ಅರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
ಕಮಲ್ ಕಟ್ಟೆ ಎಂಬಲ್ಲಿ ಗುಡ್ಡವನ್ನು ಅಗೆದು ಮಣ್ಣು ತೆಗೆಯಲಾಗಿದೆ. ಅ ಗುಡ್ಡದ ಮೇಲಿದ್ದ ಎರಡು ಕಲ್ಲುಬಂಡೆಗಳು ರಸ್ತೆಗೆ ಉರುಳಿ ಬಿದ್ದಿದೆ. ಒಂದು ಬಂಡೆ ರಸ್ತೆಯ ಮೇಲೆ ಸಂಚಾರಕ್ಕೆ ಅಡಚಣೆಯನ್ನು ಉಂಟುಮಾಡಿದರೆ ಇನ್ನೊಂದು ಕಲ್ಲು ರಸ್ತೆಯ ಬದಿಯಲ್ಲಿ ಬಿದ್ದಿದೆ. ಇದರ ಜೊತೆಗೆ ಜಾಹಿರಾತು ಫಲಕದ ಕಂಬವೊ0ದು ರಸ್ತೆಗೆ ಬಿದ್ದಿದೆ. ಕಲ್ಲುಬಂಡೆ ಹಾಗೂ ಜಾಹೀರಾತು ಫಲಕದ ಕಂಬ ಎರಡು ಕೂಡ ರಸ್ತೆಯ ಮೇಲೆ ಬಿದ್ದು ಅಪಾಯವನ್ನು ಆಹ್ವಾನಿಸುತ್ತಿದೆ. ಈ ರಸ್ತೆಯಲ್ಲಿ ಅತೀ ಹೆಚ್ಚು ವಾಹನಗಳು ಸಂಚಾರ ಮಾಡುತ್ತಿದ್ದು ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ಜೀವಕ್ಕೆ ಅಪಾಯ ಆಗುವ ಸಾಧ್ಯತೆಗಳು ಹೆಚ್ಚು ಇವೆ. ಹಾಗಾಗಿ ಎರಡು ದಿನಗಳಿಂದ ನಿರ್ಲಕ್ಷ್ಯವಹಿಸಿರುವ ಇಲಾಖೆಯ ಬಗ್ಗೆ ಸಾರ್ವಜನಿಕರು ಅಪಸ್ವರ ಎತ್ತಿದ್ದಾರೆ. ಅಪಾಯ ಆಗುವ ಮುನ್ನ ಇಲಾಖೆ ಎಚ್ಚೆತ್ತುಕೊಂಡು ಸಮಸ್ಯೆಗೆ ಮುಕ್ತಿನೀಡುವಂತೆ ಸಾರ್ವಜನಿಕ ಮನವಿಯಾಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…