ಬೆ0ಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬ್ರಹ್ಮರಕೊಟ್ಲು ಸೇತುವೆಯ ಪುಟ್ ಪಾತ್ ನಲ್ಲಿ ದೊಡ್ಡ ಹೊಂಡವೊAದು ಬಿದ್ದಿದ್ದು, ಸಾರ್ವಜನಿಕರು ಹೋಗದಂತೆ ಕಂದಾಯ ಇಲಾಖೆಯವರು ಬ್ಯಾರಿಕೇಡ್ ಅಳವಡಿಸಿ ಎಚ್ಚರಿಸುವ ಕೆಲಸ ಮಾಡಿದ್ದಾರೆ.
ಅತಿಯಾದ ಮತ್ತು ನಿರಂತರವಾಗಿ ಸುರಿಯುವ ಮಳೆಯ ನೀರು ಹರಿದುಹೋಗಲು ಸಾಧ್ಯವಾಗದೆ ಸಿಕ್ಕಸಿಕ್ಕ ಕಡೆಗಳಲ್ಲಿ ಹರಿದುಹೋಗುತ್ತಿದೆ. ಇಲ್ಲೂ ಕೂಡ ಜನರು ನಡೆದುಕೊಂಡು ಹೋಗುವ ಸೇತುವೆಯ ಒಂದು ಭಾಗದಲ್ಲಿ ಹೊಂಡನಿರ್ಮಾಣವಾಗಿ ಅದರೊಳಗೆ ನೀರು ಬೀಳುತ್ತಿದೆ. ಇದು ಅಪಾಯಕಾರಿಯಾಗಿದ್ದು, ಪಾದಾಚಾರಿಗಳು ಅದರ ಮೇಲೆ ಹೋದರೆ ಹೊಂಡದೊಳಗೆ ಬೀಳುವ ಸಾಧ್ಯತೆಗಳಿವೆ. ಹಾಗಾಗಿ ಇಲ್ಲಿ ಯಾರು ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…