ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಭಾರೀ ಮಳೆಯ ಹಿನ್ನೆಲೆ ಅಧಿಕಾರಿಗಳು ಅಲರ್ಟ್ ಆಗಿರುವಂತೆ ಶಾಸಕ ಅಶೋಕ್ ರೈ ಸೂಚನೆ

ಈ ಬಾರಿ ಮುಂಗಾರು ಮಳೆ ಒಂದು ವಾರದ ಮುಂಚೆಯೇ ಆಗಮಿಸಿದ್ದು ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಅನೇಕ ಕಡೆ ಹಾನಿಯುಂಟಾಗಿದೆ, ಹಾನಿಗೊಳಗಾದ ಸ್ಥಳಗಳಿಗೆ ತಕ್ಷಣ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಸ್ಪಂದನೆ ನೀಡುವುದರ ಜೊತೆ 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.


ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು” ಮಳೆಗಾಲಕ್ಕೆ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಹಿಂದೆಯೇ ಸೂಚನೆಯನ್ನು ನೀಡಲಾಗಿದೆ. ಗಾಳಿ ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಉರುಳಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಮುರಿದು ಬಿದ್ದ ಕಂಬಗಳ ಮರು ಜೋಡನೆ ಕಾರ್ಯ ಭರದಿಂದ ಸಾಗುತ್ತಿದೆ. ಈಗಾಗಲೇ ಮೆಸ್ಕಾಂ ಇಲಾಖೆಗೆ ಖಡಕ್ ಸೂಚನೆಯನ್ನು ನೀಡಿದ್ದೇನೆ. ಎಲ್ಲೆಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆಯೋ ಅದನ್ನು ಕೂಡಲೇ ದುರಸ್ಥಿ ಮಾಡಿ ವಿದ್ಯುತ್ ಪೂರೈಕೆ ಮಾಡುವಂತೆ ತಿಳಿಸಿದ್ದೇನೆ. ಕೌಪೌಂಡ್ ವಾಲ್ ಕಟ್ಟುವಾಗ ಮಳೆ ನೀರು ಸಂಗ್ರಹಣೆಯಾಗಿ ಪಕ್ಕದ ಮನೆಯವರಿಗೆ ತೊಂದರೆಯಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಇನ್ನು ಗ್ರಾಮೀಣ ಭಾಗದಲ್ಲಿ ಮಳೆಗೆ ಮನೆಗೆ ಅಥವಾ ಇನ್ಯಾವುದೇ ರೀತಿಯ ಹಾನಿಯಾದಲ್ಲಿ ಗ್ರಾಮಕರಣಿಕರು ತಕ್ಷಣ ಅಲ್ಲಿಗೆ ಭೇಟಿ ನೀಡಬೇಕು. ರಾತ್ರಿ ಘಟನೆ ನಡೆದರೂ ರಾತ್ರಿಯೇ ಭೇಟಿ ನೀಡಬೇಕು. ನೊಂದವರಿಗೆ ಏನೆಲ್ಲಾ ಸಹಾಯ ಬೇಕೋ ಅದೆಲ್ಲವನ್ನೂ ಇಲಾಖೆಯಿಂದ ಮಾಡಬೇಕು. ಪರಿಹಾರ ಕೊಡುವ ವಿಚಾರದಲ್ಲಿಯೂ ಕಂದಾಯ ಅಧಿಕಾರಿಗಳು ತಕ್ಷಣ ಜಾಗೃತರಾಗಿರಬೇಕು ಎಂದು ಸೂಚನೆಯನ್ನು ನೀಡಿದರು. ಅಪಾಯ ಯಕಾರಿ ಮನೆಗಳಿದ್ದಲ್ಲಿ ಅಲ್ಲಿಂದ ಆ ಕುಟುಂಬವನ್ನು ಸ್ಥಳಾಂತರಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಒಟ್ಟಿನಲ್ಲಿ ಜನರಿಗೆ ತೊಂದರೆಯಾಗದAತೆ ಇಲಾಖಾ ಅಧಿಕಾರಿಗಳು ಸ್ಪಂದನೆಯನ್ನು ನೀಡಬೇಕು ಎಂದು ಶಾಸಕರು ತಿಳಿಸಿದರು.

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!