ಈ ಬಾರಿ ಮುಂಗಾರು ಮಳೆ ಒಂದು ವಾರದ ಮುಂಚೆಯೇ ಆಗಮಿಸಿದ್ದು ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಅನೇಕ ಕಡೆ ಹಾನಿಯುಂಟಾಗಿದೆ, ಹಾನಿಗೊಳಗಾದ ಸ್ಥಳಗಳಿಗೆ ತಕ್ಷಣ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಸ್ಪಂದನೆ ನೀಡುವುದರ ಜೊತೆ 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು” ಮಳೆಗಾಲಕ್ಕೆ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಹಿಂದೆಯೇ ಸೂಚನೆಯನ್ನು ನೀಡಲಾಗಿದೆ. ಗಾಳಿ ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಉರುಳಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಮುರಿದು ಬಿದ್ದ ಕಂಬಗಳ ಮರು ಜೋಡನೆ ಕಾರ್ಯ ಭರದಿಂದ ಸಾಗುತ್ತಿದೆ. ಈಗಾಗಲೇ ಮೆಸ್ಕಾಂ ಇಲಾಖೆಗೆ ಖಡಕ್ ಸೂಚನೆಯನ್ನು ನೀಡಿದ್ದೇನೆ. ಎಲ್ಲೆಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆಯೋ ಅದನ್ನು ಕೂಡಲೇ ದುರಸ್ಥಿ ಮಾಡಿ ವಿದ್ಯುತ್ ಪೂರೈಕೆ ಮಾಡುವಂತೆ ತಿಳಿಸಿದ್ದೇನೆ. ಕೌಪೌಂಡ್ ವಾಲ್ ಕಟ್ಟುವಾಗ ಮಳೆ ನೀರು ಸಂಗ್ರಹಣೆಯಾಗಿ ಪಕ್ಕದ ಮನೆಯವರಿಗೆ ತೊಂದರೆಯಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಇನ್ನು ಗ್ರಾಮೀಣ ಭಾಗದಲ್ಲಿ ಮಳೆಗೆ ಮನೆಗೆ ಅಥವಾ ಇನ್ಯಾವುದೇ ರೀತಿಯ ಹಾನಿಯಾದಲ್ಲಿ ಗ್ರಾಮಕರಣಿಕರು ತಕ್ಷಣ ಅಲ್ಲಿಗೆ ಭೇಟಿ ನೀಡಬೇಕು. ರಾತ್ರಿ ಘಟನೆ ನಡೆದರೂ ರಾತ್ರಿಯೇ ಭೇಟಿ ನೀಡಬೇಕು. ನೊಂದವರಿಗೆ ಏನೆಲ್ಲಾ ಸಹಾಯ ಬೇಕೋ ಅದೆಲ್ಲವನ್ನೂ ಇಲಾಖೆಯಿಂದ ಮಾಡಬೇಕು. ಪರಿಹಾರ ಕೊಡುವ ವಿಚಾರದಲ್ಲಿಯೂ ಕಂದಾಯ ಅಧಿಕಾರಿಗಳು ತಕ್ಷಣ ಜಾಗೃತರಾಗಿರಬೇಕು ಎಂದು ಸೂಚನೆಯನ್ನು ನೀಡಿದರು. ಅಪಾಯ ಯಕಾರಿ ಮನೆಗಳಿದ್ದಲ್ಲಿ ಅಲ್ಲಿಂದ ಆ ಕುಟುಂಬವನ್ನು ಸ್ಥಳಾಂತರಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಒಟ್ಟಿನಲ್ಲಿ ಜನರಿಗೆ ತೊಂದರೆಯಾಗದAತೆ ಇಲಾಖಾ ಅಧಿಕಾರಿಗಳು ಸ್ಪಂದನೆಯನ್ನು ನೀಡಬೇಕು ಎಂದು ಶಾಸಕರು ತಿಳಿಸಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…