ಈ ಬಾರಿ ಮುಂಗಾರು ಮಳೆ ಒಂದು ವಾರದ ಮುಂಚೆಯೇ ಆಗಮಿಸಿದ್ದು ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಅನೇಕ ಕಡೆ ಹಾನಿಯುಂಟಾಗಿದೆ, ಹಾನಿಗೊಳಗಾದ ಸ್ಥಳಗಳಿಗೆ ತಕ್ಷಣ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಸ್ಪಂದನೆ ನೀಡುವುದರ ಜೊತೆ 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು” ಮಳೆಗಾಲಕ್ಕೆ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಹಿಂದೆಯೇ ಸೂಚನೆಯನ್ನು ನೀಡಲಾಗಿದೆ. ಗಾಳಿ ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಉರುಳಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಮುರಿದು ಬಿದ್ದ ಕಂಬಗಳ ಮರು ಜೋಡನೆ ಕಾರ್ಯ ಭರದಿಂದ ಸಾಗುತ್ತಿದೆ. ಈಗಾಗಲೇ ಮೆಸ್ಕಾಂ ಇಲಾಖೆಗೆ ಖಡಕ್ ಸೂಚನೆಯನ್ನು ನೀಡಿದ್ದೇನೆ. ಎಲ್ಲೆಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆಯೋ ಅದನ್ನು ಕೂಡಲೇ ದುರಸ್ಥಿ ಮಾಡಿ ವಿದ್ಯುತ್ ಪೂರೈಕೆ ಮಾಡುವಂತೆ ತಿಳಿಸಿದ್ದೇನೆ. ಕೌಪೌಂಡ್ ವಾಲ್ ಕಟ್ಟುವಾಗ ಮಳೆ ನೀರು ಸಂಗ್ರಹಣೆಯಾಗಿ ಪಕ್ಕದ ಮನೆಯವರಿಗೆ ತೊಂದರೆಯಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಇನ್ನು ಗ್ರಾಮೀಣ ಭಾಗದಲ್ಲಿ ಮಳೆಗೆ ಮನೆಗೆ ಅಥವಾ ಇನ್ಯಾವುದೇ ರೀತಿಯ ಹಾನಿಯಾದಲ್ಲಿ ಗ್ರಾಮಕರಣಿಕರು ತಕ್ಷಣ ಅಲ್ಲಿಗೆ ಭೇಟಿ ನೀಡಬೇಕು. ರಾತ್ರಿ ಘಟನೆ ನಡೆದರೂ ರಾತ್ರಿಯೇ ಭೇಟಿ ನೀಡಬೇಕು. ನೊಂದವರಿಗೆ ಏನೆಲ್ಲಾ ಸಹಾಯ ಬೇಕೋ ಅದೆಲ್ಲವನ್ನೂ ಇಲಾಖೆಯಿಂದ ಮಾಡಬೇಕು. ಪರಿಹಾರ ಕೊಡುವ ವಿಚಾರದಲ್ಲಿಯೂ ಕಂದಾಯ ಅಧಿಕಾರಿಗಳು ತಕ್ಷಣ ಜಾಗೃತರಾಗಿರಬೇಕು ಎಂದು ಸೂಚನೆಯನ್ನು ನೀಡಿದರು. ಅಪಾಯ ಯಕಾರಿ ಮನೆಗಳಿದ್ದಲ್ಲಿ ಅಲ್ಲಿಂದ ಆ ಕುಟುಂಬವನ್ನು ಸ್ಥಳಾಂತರಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಒಟ್ಟಿನಲ್ಲಿ ಜನರಿಗೆ ತೊಂದರೆಯಾಗದAತೆ ಇಲಾಖಾ ಅಧಿಕಾರಿಗಳು ಸ್ಪಂದನೆಯನ್ನು ನೀಡಬೇಕು ಎಂದು ಶಾಸಕರು ತಿಳಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…