ಈ ಬಾರಿ ಮುಂಗಾರು ಮಳೆ ಒಂದು ವಾರದ ಮುಂಚೆಯೇ ಆಗಮಿಸಿದ್ದು ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಅನೇಕ ಕಡೆ ಹಾನಿಯುಂಟಾಗಿದೆ, ಹಾನಿಗೊಳಗಾದ ಸ್ಥಳಗಳಿಗೆ ತಕ್ಷಣ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಸ್ಪಂದನೆ ನೀಡುವುದರ ಜೊತೆ 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು” ಮಳೆಗಾಲಕ್ಕೆ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಹಿಂದೆಯೇ ಸೂಚನೆಯನ್ನು ನೀಡಲಾಗಿದೆ. ಗಾಳಿ ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಉರುಳಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಮುರಿದು ಬಿದ್ದ ಕಂಬಗಳ ಮರು ಜೋಡನೆ ಕಾರ್ಯ ಭರದಿಂದ ಸಾಗುತ್ತಿದೆ. ಈಗಾಗಲೇ ಮೆಸ್ಕಾಂ ಇಲಾಖೆಗೆ ಖಡಕ್ ಸೂಚನೆಯನ್ನು ನೀಡಿದ್ದೇನೆ. ಎಲ್ಲೆಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆಯೋ ಅದನ್ನು ಕೂಡಲೇ ದುರಸ್ಥಿ ಮಾಡಿ ವಿದ್ಯುತ್ ಪೂರೈಕೆ ಮಾಡುವಂತೆ ತಿಳಿಸಿದ್ದೇನೆ. ಕೌಪೌಂಡ್ ವಾಲ್ ಕಟ್ಟುವಾಗ ಮಳೆ ನೀರು ಸಂಗ್ರಹಣೆಯಾಗಿ ಪಕ್ಕದ ಮನೆಯವರಿಗೆ ತೊಂದರೆಯಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಇನ್ನು ಗ್ರಾಮೀಣ ಭಾಗದಲ್ಲಿ ಮಳೆಗೆ ಮನೆಗೆ ಅಥವಾ ಇನ್ಯಾವುದೇ ರೀತಿಯ ಹಾನಿಯಾದಲ್ಲಿ ಗ್ರಾಮಕರಣಿಕರು ತಕ್ಷಣ ಅಲ್ಲಿಗೆ ಭೇಟಿ ನೀಡಬೇಕು. ರಾತ್ರಿ ಘಟನೆ ನಡೆದರೂ ರಾತ್ರಿಯೇ ಭೇಟಿ ನೀಡಬೇಕು. ನೊಂದವರಿಗೆ ಏನೆಲ್ಲಾ ಸಹಾಯ ಬೇಕೋ ಅದೆಲ್ಲವನ್ನೂ ಇಲಾಖೆಯಿಂದ ಮಾಡಬೇಕು. ಪರಿಹಾರ ಕೊಡುವ ವಿಚಾರದಲ್ಲಿಯೂ ಕಂದಾಯ ಅಧಿಕಾರಿಗಳು ತಕ್ಷಣ ಜಾಗೃತರಾಗಿರಬೇಕು ಎಂದು ಸೂಚನೆಯನ್ನು ನೀಡಿದರು. ಅಪಾಯ ಯಕಾರಿ ಮನೆಗಳಿದ್ದಲ್ಲಿ ಅಲ್ಲಿಂದ ಆ ಕುಟುಂಬವನ್ನು ಸ್ಥಳಾಂತರಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಒಟ್ಟಿನಲ್ಲಿ ಜನರಿಗೆ ತೊಂದರೆಯಾಗದAತೆ ಇಲಾಖಾ ಅಧಿಕಾರಿಗಳು ಸ್ಪಂದನೆಯನ್ನು ನೀಡಬೇಕು ಎಂದು ಶಾಸಕರು ತಿಳಿಸಿದರು.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…