ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶಾಸಕರ ಅಮಾನತು ಸ್ಪೀಕರ್ ಆದೇಶವೇ ಅಸಾಂವಿಧಾನಿಕ : ಯಶ್ ಪಾಲ್ ಸುವರ್ಣ

ಕಳೆದ ಅಧಿವೇಶನ ಅವಧಿಯಲ್ಲಿ ಸ್ಪೀಕರ್ 18 ಮಂದಿ ಶಾಸಕರ ಅಮಾನತು ಆದೇಶವೇ ಅಸಾಂವಿಧಾನಿಕ ನಡೆಯಾಗಿದ್ದು, ಇದೀಗ ಸ್ಪೀಕರ್‌ರವರು ತಮ್ಮ ಆದೇಶವನ್ನು ಹಿಂಪಡೆಯುವ ಮೂಲಕ ಶಾಸಕರಾಗಿ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಅವಕಾಶ ನೀಡಿದಂತಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದಾರೆ.


ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಸರಕಾರಿ ಕಾಮಗಾರಿಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಹಾಗೂ ಕಾಂಗ್ರೆಸ್ ಸಚಿವರು ಶಾಸಕರ ಹನಿಟ್ರ‍್ಯಾಪ್ ವಿಚಾರದ ಬಗ್ಗೆ ವಿಪಕ್ಷದ ಶಾಸಕರಾಗಿ ಸದನದಲ್ಲಿ ಆಡಳಿತರೂಡ ಸರಕಾರವನ್ನು ವಿರೋಧಿಸುವುದು ನಮ್ಮ ಕರ್ತವ್ಯ. ಸ್ಪೀಕರ್ ಏಕಪಕ್ಷೀಯವಾಗಿ 6 ತಿಂಗಳ ಕಾಲ ಶಾಸಕರನ್ನು ಅಮಾನತು ಮಾಡುವ ಮೂಲಕ ನಮ್ಮ ಸಂವಿಧಾನ ಬದ್ಧ ಹಕ್ಕುಗಳನ್ನು ನಿರ್ಬಂಧಿಸಿದ್ದು ದುರದೃಷ್ಟಕರ. ಈಗಾಗಲೇ ಬಿಜೆಪಿ ಪಕ್ಷದ ವತಿಯಿಂದ ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ರಾಜ್ಯದ ಘನವೆತ್ತ ರಾಜ್ಯಪಾಲರೂ ಸ್ಪೀಕರ್ ರವರಿಗೆ ಅಮಾನತು ಆದೇಶ ಹಿಂಪಡೆಯುವAತೆ ಪತ್ರ ಬರೆದಿದ್ರು. ಓರ್ವ ವಿಪಕ್ಷ ಶಾಸಕನಾಗಿ ಸರ್ಕಾರದ ಜನವಿರೋಧಿ ನೀತಿ ಹಾಗೂ ಮಸೂದೆಗಳನ್ನು ವಿರೋಧಿಸುವುದು ನನ್ನ ಕರ್ತವ್ಯ. ಇಂತಹ ಅಮಾನತು ಆದೇಶಗಳಿಂದ ನಮ್ಮ ಹೋರಾಟವನ್ನು ಹತ್ತಿಕ್ಕಲು ಎಂದಿಗೂ ಸಾಧ್ಯವಿಲ್ಲ ಹಾಗೂ ನಮ್ಮ ಸಿದ್ಧಾಂತ ಹಾಗೂ ರಾಷ್ಟೀಯ ವಿಚಾರದಲ್ಲಿ ಎಂದಿಗೂ ರಾಜೀ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!