ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶಾಸಕರ ಅಮಾನತು ಸ್ಪೀಕರ್ ಆದೇಶವೇ ಅಸಾಂವಿಧಾನಿಕ : ಯಶ್ ಪಾಲ್ ಸುವರ್ಣ

ಕಳೆದ ಅಧಿವೇಶನ ಅವಧಿಯಲ್ಲಿ ಸ್ಪೀಕರ್ 18 ಮಂದಿ ಶಾಸಕರ ಅಮಾನತು ಆದೇಶವೇ ಅಸಾಂವಿಧಾನಿಕ ನಡೆಯಾಗಿದ್ದು, ಇದೀಗ ಸ್ಪೀಕರ್‌ರವರು ತಮ್ಮ ಆದೇಶವನ್ನು ಹಿಂಪಡೆಯುವ ಮೂಲಕ ಶಾಸಕರಾಗಿ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಅವಕಾಶ ನೀಡಿದಂತಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದಾರೆ.


ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಸರಕಾರಿ ಕಾಮಗಾರಿಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಹಾಗೂ ಕಾಂಗ್ರೆಸ್ ಸಚಿವರು ಶಾಸಕರ ಹನಿಟ್ರ‍್ಯಾಪ್ ವಿಚಾರದ ಬಗ್ಗೆ ವಿಪಕ್ಷದ ಶಾಸಕರಾಗಿ ಸದನದಲ್ಲಿ ಆಡಳಿತರೂಡ ಸರಕಾರವನ್ನು ವಿರೋಧಿಸುವುದು ನಮ್ಮ ಕರ್ತವ್ಯ. ಸ್ಪೀಕರ್ ಏಕಪಕ್ಷೀಯವಾಗಿ 6 ತಿಂಗಳ ಕಾಲ ಶಾಸಕರನ್ನು ಅಮಾನತು ಮಾಡುವ ಮೂಲಕ ನಮ್ಮ ಸಂವಿಧಾನ ಬದ್ಧ ಹಕ್ಕುಗಳನ್ನು ನಿರ್ಬಂಧಿಸಿದ್ದು ದುರದೃಷ್ಟಕರ. ಈಗಾಗಲೇ ಬಿಜೆಪಿ ಪಕ್ಷದ ವತಿಯಿಂದ ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ರಾಜ್ಯದ ಘನವೆತ್ತ ರಾಜ್ಯಪಾಲರೂ ಸ್ಪೀಕರ್ ರವರಿಗೆ ಅಮಾನತು ಆದೇಶ ಹಿಂಪಡೆಯುವAತೆ ಪತ್ರ ಬರೆದಿದ್ರು. ಓರ್ವ ವಿಪಕ್ಷ ಶಾಸಕನಾಗಿ ಸರ್ಕಾರದ ಜನವಿರೋಧಿ ನೀತಿ ಹಾಗೂ ಮಸೂದೆಗಳನ್ನು ವಿರೋಧಿಸುವುದು ನನ್ನ ಕರ್ತವ್ಯ. ಇಂತಹ ಅಮಾನತು ಆದೇಶಗಳಿಂದ ನಮ್ಮ ಹೋರಾಟವನ್ನು ಹತ್ತಿಕ್ಕಲು ಎಂದಿಗೂ ಸಾಧ್ಯವಿಲ್ಲ ಹಾಗೂ ನಮ್ಮ ಸಿದ್ಧಾಂತ ಹಾಗೂ ರಾಷ್ಟೀಯ ವಿಚಾರದಲ್ಲಿ ಎಂದಿಗೂ ರಾಜೀ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!