ಗೃಹಸಚಿವ ಡಾ. ಜಿ. ಪರಮೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪದೇ ಪದೇ ನನ್ನ ಮಗ ರೌಡಿ ರೌಡಿ ಎಂದು ಹೇಳುತ್ತಿದ್ದಾರೆ.
ಆದರೆ, ನನ್ನ ಮಗ ಹಿಂದೂ ಕಾರ್ಯಕರ್ತ. ಹಿಂದೂ ಸಮಾಜದ ಸೇವೆಯಲ್ಲಿ ತನ್ನನ್ನು ಅರ್ಪಿಸಿಕೊಂಡಿದ್ದ ನನ್ನ ಮಗನ ಸಾವು ವ್ಯರ್ಥವಾಗಲು ಬಿಡಬಾರದು. ಅವನ ರಕ್ತಕ್ಕೆ, ಸಾವಿಗೆ ನ್ಯಾಯ ಸಿಗಬೇಕು. ರಾಜ್ಯದ ಸರಕಾರ ಪಿಎಫ್ಐ ಹೇಳಿದಂತೆ ಚಾರ್ಜ್ಶೀಟ್ ತಯಾರಿಸುವ ಸಾಧ್ಯತೆ ಇದೆ ಎಂದು ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಎಂ.ಶೆಟ್ಟಿ ಆಗ್ರಹಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎಗೆ ನೀಡಬೇಕು ಎಂದು ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಮ್ಮಿಕೊಂಡಿದ್ದ `ಬಜಪೆ ಚಲೋ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ರು.
ನನ್ನ ಮಗ ರೌಡಿಯಲ್ಲ ನನ್ನ ಮಗ ಭಜರಂಗದಳದ ಕಾರ್ಯಕರ್ತ. ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ನನ್ನ ಮಗನ ಕೊಲೆ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸಲು ಈ ಸರಕಾರ ಅವಕಾಶ ನೀಡುವುದಿಲ್ಲ. ತನಿಖೆಯನ್ನು ಎನ್ಐಎಗೆ ವಹಿಸಬೇಕು. ಐವತ್ತಕ್ಕೂ ಹೆಚ್ಚು ಜನರು ಸುತ್ತುವರಿದು ನನ್ನ ಮಗನಿಗೆ ಚಿತ್ರ ಹಿಂಸೆ ಕೊಟ್ಟು ಕೊಂದು ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…