ಗೃಹಸಚಿವ ಡಾ. ಜಿ. ಪರಮೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪದೇ ಪದೇ ನನ್ನ ಮಗ ರೌಡಿ ರೌಡಿ ಎಂದು ಹೇಳುತ್ತಿದ್ದಾರೆ.
ಆದರೆ, ನನ್ನ ಮಗ ಹಿಂದೂ ಕಾರ್ಯಕರ್ತ. ಹಿಂದೂ ಸಮಾಜದ ಸೇವೆಯಲ್ಲಿ ತನ್ನನ್ನು ಅರ್ಪಿಸಿಕೊಂಡಿದ್ದ ನನ್ನ ಮಗನ ಸಾವು ವ್ಯರ್ಥವಾಗಲು ಬಿಡಬಾರದು. ಅವನ ರಕ್ತಕ್ಕೆ, ಸಾವಿಗೆ ನ್ಯಾಯ ಸಿಗಬೇಕು. ರಾಜ್ಯದ ಸರಕಾರ ಪಿಎಫ್ಐ ಹೇಳಿದಂತೆ ಚಾರ್ಜ್ಶೀಟ್ ತಯಾರಿಸುವ ಸಾಧ್ಯತೆ ಇದೆ ಎಂದು ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಎಂ.ಶೆಟ್ಟಿ ಆಗ್ರಹಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎಗೆ ನೀಡಬೇಕು ಎಂದು ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಮ್ಮಿಕೊಂಡಿದ್ದ `ಬಜಪೆ ಚಲೋ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ರು.
ನನ್ನ ಮಗ ರೌಡಿಯಲ್ಲ ನನ್ನ ಮಗ ಭಜರಂಗದಳದ ಕಾರ್ಯಕರ್ತ. ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ನನ್ನ ಮಗನ ಕೊಲೆ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸಲು ಈ ಸರಕಾರ ಅವಕಾಶ ನೀಡುವುದಿಲ್ಲ. ತನಿಖೆಯನ್ನು ಎನ್ಐಎಗೆ ವಹಿಸಬೇಕು. ಐವತ್ತಕ್ಕೂ ಹೆಚ್ಚು ಜನರು ಸುತ್ತುವರಿದು ನನ್ನ ಮಗನಿಗೆ ಚಿತ್ರ ಹಿಂಸೆ ಕೊಟ್ಟು ಕೊಂದು ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…