ಇತರೆ

ಕಟೀಲು : ಮುಂದಿನ ತಿರುಗಾಟದಿಂದ ಕಟೀಲು ಏಳನೆಯ ಮೇಳ ಆರಂಭ

ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಬಯಲಾಟ ಮಂಡಳಿಯ ಮುಂದಿನ ತಿರುಗಾಟ ಏಳು ಮೇಳಗಳೊಂದಿಗೆ ನಡೆಯಲಿದೆ ಎಂದು ಕಟೀಲು ದೇಗುಲದ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಮಾಹಿತಿ ನೀಡಿದರು.
ಕಟೀಲು ದೇಗುಲದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಭಾನುವಾರ ಮಹಾಪೂಜೆಯ ಬಳಿಕ ಹೂಪ್ರಶ್ನೆಯ ಮೂಲಕ ದೇವರ ಒಪ್ಪಿಗೆ ಸಿಕ್ಕಿದ್ದು ನವೆಂಬರ್ 16ರಂದು ನೂತನ ಮೇಳದೊಂದಿಗೆ ತಿರುಗಾಟ ನಡೆಯಲಿದೆ.
ಕಟೀಲು ಒಂದನೇ ಮೇಳ ಯಾವಾಗ ಆರಂಭವಾಗಿತ್ತು ಎಂಬ ಮಾಹಿತಿ ಇಲ್ಲ. ಎರಡನೆಯ ಮೇಳ 1975ರಲ್ಲಿ. ಮೂರನೆಯ ಮೇಳ 82ರಲ್ಲಿ ನಾಲ್ಕನೆಯ ಮೇಳ 93ರಲ್ಲಿ 2010ರಲ್ಲಿ ಐದನೆಯ ಮೇಳ 2013 ರಲ್ಲಿ ಆರನೆಯ ಮೇಳ ಆರಂಭವಾಗಿತ್ತು. ವರ್ಷಂಪ್ರತಿ ನೋಂದಾವಣೆಯಾಗುತ್ತಿರುವ ಆಟಗಳ ಸಂಖ್ಯೆ ಹೆಚ್ಚುತ್ತಿದ್ದು ಏಳನೆಯ ಮೇಳ ಆರಂಭಿಸಲಾಗುತ್ತಿದೆ. ವಾರ್ಷಿಕ ಸುಮಾರು 1050 ಪ್ರದರ್ಶನಗಳಲ್ಲಿ 450 ಆಟ ಖಾಯಂ ಆಗಿದ್ದರೆ 240 ಆಟ ತತ್ಕಾಲ್ ಅಡಿ ಕೊಡಲಾಗುತ್ತಿದೆ. ಮುಂಗಡ ಬುಕ್ಕಿಂಗ್ ಏಳು ಸಾವಿರಕ್ಕೂ ಹೆಚ್ಚು ಆಟಗಳಿದ್ದು ಕಳೆದ ವರ್ಷ 844 ಆಟ ಬುಕ್ಕಿಂಗ್ ಆಗಿವೆ. ನವೆಂಬರ್‌ನಲ್ಲಿ ದೀಪೋತ್ಸವದ ಬಳಿಕ ಮೇಳದ ತಿರುಗಾಟ ನಡೆಯಲಿದೆ. ನೂತನ ಮೇಳಕ್ಕೆ ಅಗತ್ಯವಿರುವ ಚಿನ್ನದ ಕಿರೀಟ ಸೇರಿದಂತೆ ಕೆಲವು ವಸ್ತುಗಳು ಈಗಾಗಲೇ ದೇವಳದಲ್ಲಿದ್ದು, ಈ ವರುಷ ಎರಡು ಬೆಳ್ಳಿಯ ಕಿರೀಟಗಳು ಮೇಳಕ್ಕೆ ಬಂದಿವೆ. ಅಲ್ಲದೆ ಅನೇಕ ವಸ್ತುಗಳನ್ನು ನೀಡಲು ಭಕ್ತರು ಮುಂದೆ ಬಂದಿದ್ದಾರೆ. ಈ ಹಿಂದೆಯೂ ಮೇಳ ಹೊಸದಾಗಿ ಮಾಡುವ ಸಂದರ್ಭ ದೇವಸ್ಥಾನಕ್ಕೆ ಯಾವುದೇ ಖರ್ಚು ಬಂದಿಲ್ಲ. ಭಕ್ತರೇ ಒದಗಿಸಿಕೊಟ್ಟಿದ್ದಾರೆ. ಮೇಳದಲ್ಲಿ ನ್ಯಾಯವಾದಿಗಳು, ಇಂಜಿನಿಯರ್, ಉಪನ್ಯಾಸಕರು, ಸರಕಾರಿ ಉದ್ಯೋಗಿಗಳು, ಡಾಕ್ಟರೇಟ್ ಮಾಡಿದವರು ಹೀಗೆ ವಿವಿಧ ಉದ್ಯೋಗಗಳಲ್ಲಿ ಇರುವವರು, ವಿದ್ಯಾವಂತರೂ ಇದ್ದಾರೆ. ಜೊತೆಗೆ ಹೊಸ ಕಲಾವಿದರೂ ಇದ್ದಾರೆ. ಹೊಸ ಕಲಾವಿದರಿಗೆ ಯಕ್ಷಗಾನ ತರಬೇತಿ ನೀಡಲು ತರಬೇತಿ ಶಾಲೆಯ ಚಿಂತನೆ ಇದೆ. ಬೆಂಗಳೂರು, ಮೈಸೂರು ಸೇರಿದಂತೆ ಕರಾವಳಿ ಹೊರತು ಪಡಿಸಿದ ಜಿಲ್ಲೆಗಳಿಂದಲೂ ಯಕ್ಷಗಾನಕ್ಕೆ ಬೇಡಿಕೆ ಬಂದಿದ್ದು, ಸಾಧ್ಯಾಸಾಧ್ಯತೆಗಳನ್ನು ಅವಲೋಕಿಸಿ, ಪ್ರದರ್ಶನಕ್ಕೆ ಗಮನ ಹರಿಸಲಾಗುವುದು ಎಂದು ಶ್ರೀಹರಿ ಆಸ್ರಣ್ಣ ತಿಳಿಸಿದರು. ದೇಗಲದ ಆಡಳಿತ ಸಮಿತಿ ಅಧ್ಯಕ್ಷ ಸನತ್ ಕುಮಾರ ಶೆಟ್ಟಿ ಕೊಡೆತ್ತೂರುಗುತ್ತು, ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಮೇಳಗಳ ಸಂಚಾಲಕ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ, ಬಿಪಿನ್ ಚಂದ್ರ ಶೆಟ್ಟಿ, ಪ್ರವೀಣ್ ಚಂದ್ರ ಶೆಟ್ಟಿ, ಐಕಳ ಗಣೇಶ ಶೆಟ್ಟಿ ಮತ್ತಿತರರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

2 days ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

2 days ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

3 days ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

3 days ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

3 days ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

3 days ago