ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಪದವು ಸೋರ್ನಾಡು ರಾಜ್ಯ ಹೆದ್ದಾರಿಯ ನೂದಬೆಟ್ಟು ಎಂಬಲ್ಲಿ ರಸ್ತೆ ಪಕ್ಕದ ಜಾಗವನ್ನು ಬೂಮಾಲಕರು ಸಮತಟ್ಟು ಮಾಡಿರುವ ಕಾರಣದಿಂದ ಮಳೆಗೆ ಅಲ್ಲಿನ ಮಣ್ಣು ರಸ್ತೆಗೆ ಬಿದ್ದು ಚರಂಡಿ ಮುಚ್ಚಿ ಹೋಗಿ ರಸ್ತೆಯಲ್ಲಿ ಸಾರ್ವಜನಿಕರಿಗೆ ವಾಹನ ಸಂಚಾರಕ್ಕೆ ತೀವ್ರ ಅಡಚನೆಯಾಗಿತ್ತು.
ಇದನ್ನು ಗಮನಿಸಿ ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಹಾಗೂ ಸದಸ್ಯರಾದ ಜಗದೀಶ್ ದುರ್ಗಾ ಕೋಡಿ ತಕ್ಷಣ ಸ್ಥಳಕ್ಕೆ ತೆರಳಿ ಜೆಸಿಬಿ ಬಳಸಿ ಮಣ್ಣು ಕಲ್ಲುಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಿಸಿದರು.
ಈ ಸಂದರ್ಭ ಪಂಚಾಯತ್ ಸಿಬ್ಬಂದಿ ಶ್ರೀ ಲಕ್ಷ್ಮಣ್ ಅವರು ಸ್ಥಳದಲ್ಲಿ ಇದ್ದು ಸಹಕರಿಸಿದರು,. ಪಂಚಾಯಿತಿ ಅಧ್ಯಕ್ಷರ ಹಾಗೂ ಸದಸ್ಯರ ಕಾರ್ಯವೈಕರಿಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…