ಅಸೈಗೋಳಿಯ ಕಾರುಣ್ಯ ಫೌಂಡೇಶನ್ ವತಿಯಿಂದ ಅಸೈಗೋಳಿ ಲಯನ್ಸ್ ಸೇವಾ ಸದನದಲ್ಲಿ ಎರಡನೇ ವರ್ಷದ ‘ಕಾರುಣ್ಯೋತ್ಸವ-2025’ ಶೈಕ್ಷಣಿಕ ದತ್ತು ಸ್ವೀಕಾರ, ಸಾಧಕರಿಗೆ ಸನ್ಮಾನ, ಕಾರುಣ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಮಾತನಾಡಿ, ನಾವು ಉನ್ನತ ಶಿಕ್ಷಣ ಪಡೆದರೂ, ಎಷ್ಟು ದೊಡ್ಡ ಹುದ್ದೆಯಲ್ಲಿದ್ದರೂ ಈ ಮಟ್ಟಕ್ಕೆ ತಲುಪಲು ಶೈಕ್ಷಣಿಕ ಜೀವನದಲ್ಲಿ ನಮಗೆ ಸಹಾಯ ಮಾಡಿದವರನ್ನೂ ನೆನಪಿಸಿಕೊಂಡು ಸಮಾಜದಲ್ಲಿ ಹಿಂದುಳಿದವರಿಗೆ ಸಹಾಯ ಮಾಡುವ ಗುಣ ಹೊಂದಿರಬೇಕು ಎಂದು ತಿಳಿಸಿದರು. ಪಾನೀರ್ ದಯಾಮಾತೆ ದೇವಾಲಯದ 21 ಅಯೋಗಗಳ ಸಂಯೋಜಕ ರೊನಾಲ್ಡ್ ಪ್ರಕಾಶ್ ಮಾತನಾಡಿ, ಮಾನವೀಯತೆ ಇರುವಲ್ಲಿ ಕರುಣೆ ಇದ್ದೇ ಇರುತ್ತದೆ, ಬಡಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಕಾರ್ಯಕ್ರಮ ಕರುಣೆಯ ಭಾಗ ಎಂದರು.
ಜಮೀಯತುಲ್ ಫಲಾಹ್ ಉಳ್ಳಾಲ ತಾಲೂಕು ಅಧ್ಯಕ್ಷ ಅಬ್ದುಲ್ ನಾಸೀರ್ ಕೆ.ಕೆ. ಮಾತಾನಾಡಿ, ಸಮಾಜದಲ್ಲಿ ಸಾಧನೆ ಮಾಡಿದ ಪ್ರತಿಯೊಬ್ಬರನ್ನೂ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಪ್ರತಿಯೊಬ್ಬರೂ ಮಾಡಬೇಕು, ಉತ್ತಮ ಕಾರ್ಯ ಮಾಡುವವರಿಗೆ ಸದಾ ಸಹಕಾರ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ಈ ಸಂದರ್ಭ ನಿವೃತ್ತ ಶಿಕ್ಷಕಿ ಬೆನ್ನಿ ಡಿಸೋಜ, ಸಾಮಾಜಿಕ ಮುಖಂಡ ಸುರೇಶ್ ಅಸೈ ಹಾಗೂ ರಾಷ್ಟ್ರೀಯ ವಾಲಿಬಾಲ್ ಆಟಗಾರ ಖಲೀಲ್ ಕೈರಂಗಳ ಇವರಿಗೆ ಕಾರುಣ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಎಸ್ಸೆಸ್ಸೆಎಲ್ಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ನಿಶಾ ಅಂಜುಮ್, ಪ್ರಜನ್ಯ, ಲಾವಣ್ಯ, ಮತ್ತು ಶ್ರೇಯ, ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ತೃಷಾ, ಭೂಮಿಕಾ ಇವರಿಗೆ ಕಾರುಣ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರುಣ್ಯ ಫೌಂಡೇಶನ್ ಗೌರವಾಧ್ಯಕ್ಷ ಆನಂದ ಕೆ.ಅಸೈಗೋಳಿ ಅಧ್ಯಕ್ಷತೆ ವಹಿಸಿದ್ದರು. ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಭಾಸ್ಕರ ಅರಸರಮೂಲೆ, ಅಸೈಗೋಳಿ ಪರಂಜ್ಯೋತಿ ಮಾತೃಮಂಡಳಿ ಅಧ್ಯಕ್ಷೆ ನಾಗವೇಣಿ ಶೆಟ್ಟಿ, ಮಂಗಳಗ0ಗೋತ್ರಿ ಜೆಸಿಐ ಪೂರ್ವಾಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹಾ, ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ . ಸುಮನಾ ಅಸೈಗೋಳಿ, ಹರೀಶ್ ಮಾಸ್ಟರ್ ಹಾಗೂ ಲಾವಣ್ಯ . ಕೋಶಾಧಿಕಾರಿ ಸುಧಾಕರ ನಾಯಕ್ . ದೈಹಿಕ ಶಿಕ್ಷಣ ಶಿಕ್ಷಕ ರಾಜೀವ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…