ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಮ.ನ.ಪಾ ವ್ಯಾಪ್ತಿಯಲ್ಲಿ ಸಾವಿರಾರು ಜನರು ಆಸ್ತಿ ತೆರಿಗೆ ಪಾವತಿಸುವಾಗ ಶೇ.5 ರಷ್ಟು ರಿಯಾಯಿತಿಯಿಂದ ವಂಚಿತ..!!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಆದೇಶದಿಂದ ಸಾವಿರಾರು ಜನರು ಆಸ್ತಿ ತೆರಿಗೆ ಪಾವತಿಸುವಾಗ ಶೇ.5 ರಷ್ಟು ರಿಯಾಯಿತಿಯಿಂದ ವಂಚಿತರಾಗಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಮ.ನ.ಪಾ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತೀ ಆರ್ಥಿಕ ವರ್ಷದ ಆರಂಭದಿಂದ ಅಂದರೆ ಏಪ್ರಿಲ್ 30 ರವರೆಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು ಅದರನ್ವಯ ಅನೇಕರು ರಿಯಾಯಿತಿ ಸೌಲಭ್ಯ ಪಡೆದಿದ್ದಾರೆ. ಆದರೆ ರಾಜ್ಯ ಸರ್ಕಾರವು ಮೇ 9 ರಂದು ಆದೇಶವೊಂದನ್ನು ಹೊರಡಿಸಿ ಜೂನ್ ಅಂತ್ಯದ ವರೆಗೆ 2025-26ನೇ ಸಾಲಿನ ಆಸ್ತಿ ತೆರಿಗೆಯಲ್ಲಿ ರಿಯಾಯಿತಿಯ ಕಾಲಾವಧಿಯನ್ನು ವಿಸ್ತರಿಸಿದ್ದು ಮನಪಾ ವ್ಯಾಪ್ತಿಯಲ್ಲಿ ಮೇ 11 ರಿಂದ ಅನ್ವಯವಾಗಿದೆ. ಹೀಗಿರುವಾಗ ಮೇ 1 ರಿಂದ 11 ರ ವರೆಗೆ ಮ.ನ.ಪಾ ವ್ಯಾಪ್ತಿಯಲ್ಲಿ ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಶೇ.5 ರಷ್ಟು ರಿಯಾಯಿತಿ ನೀಡದೇ ಆಸ್ತಿ ತೆರಿಗೆ ವಸೂಲು ಮಾಡಲಾಗಿದ್ದು ಪ್ರಾಮಾಣಿಕವಾಗಿ ತೆರಿಗೆ ಪಾವತಿಸಿದವರು ರಿಯಾಯಿತಿ ಸೌಲಭ್ಯದಿಂದ ವಂಚಿತವಾದಂತಾಗಿದೆ. ಈ ಬಗ್ಗೆ ಜನಸಾಮಾನ್ಯರಿಂದ ದೂರುಗಳು ಸಹ ಬರುತ್ತಿವೆ ಎಂದರು.

ಕೂಡಲೇ ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಸಂಗ್ರಹಿಸಲಾಗಿರುವ ಹೆಚ್ಚುವರಿ ತೆರಿಗೆಯನ್ನು ಹಿಂತಿರುಗಿಸಬೇಕು ಇಲ್ಲವೇ ಮುಂದಿನ ಆರ್ಥಿಕ ವರ್ಷದ ಆಸ್ತಿ ತೆರಿಗೆಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಶಾಸಕ ಕಾಮತ್ ರವರು ಆಗ್ರಹಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!